ಬನಶಂಕರಿ ಪೊಲೀಸ್ ಠಾಣೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಯುವತಿ ಜತೆ ಅಸಭ್ಯ ವರ್ತನೆ ಕಿಡಿಗೇಡಿಗೆ ಹಿಗ್ಗಾಮುಗ್ಗಾ ಗೂಸಾ

ಕೆಲಸಕ್ಕೆ ಹೋಗಲು ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಿಡಿಗೇಡಿಯನ್ನು..

ಬೆಂಗಳೂರು: ಕೆಲಸಕ್ಕೆ ಹೋಗಲು ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಿಡಿಗೇಡಿಯನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಬನಶಂಕರಿ ಸಮೀಪದ ಕದಿರೇನ ಹಳ್ಳಿ ರಿಂಗ್ ರಸ್ತೆ ಬಸ್ ನಿಲ್ದಾಣದ ಬಳಿ ನಡೆದಿದೆ.

ಬಿಪಿಒ ಉದ್ಯೋಗಿಯಾಗಿರುವ ಯುವತಿ ರಾತ್ರಿ 10.30ಕ್ಕೆ ಕ್ಯಾಬ್‌ಗಾಗಿ ಕಾಯುತ್ತಿದ್ದಳು. ರಾತ್ರಿಯಾಗಿದ್ದ ಕಾರಣ ಜತೆಗೆ ಆಕೆಯ ತಂದೆಯೂ ಆಗಮಿಸಿದ್ದರು. ಈ ವೇಳೆ ಮೂವರು ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ. ಈ ಪೈಕಿ ಸತೀಶ್ ಎಂಬಾತ ಹಿಂದಿನಿಂದ ಬಂದು ಯುವತಿಯನ್ನು ಹಿಡಿದುಕೊಂಡು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಆಗ ಯುವತಿ ಕಿರುಚಿಕೊಂಡಿದ್ದು, ಜತೆಯಲ್ಲಿದ್ದ ತಂದೆ ಆತನನ್ನು ಹಿಡಿದುಕೊಂಡಿದ್ದಾರೆ. ಆಗ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಕಿಡಿಗೇಡಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸತೀಶನಿಗೆ ಪೆಟ್ಟು ಬೀಳುತ್ತಿದ್ದಂತೆ ಜತೆಗಿದ್ದ ಇಬ್ಬರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬನಶಂಕರಿ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ. ಸತೀಶ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ಹಾಗೂ ಮಣಿ ಎಂಬ ಇತರ ಇಬ್ಬರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಮೂವರೂ ಭುವನೇಶ್ವರಿ ನಗರ ನಿವಾಸಿಗಳಾಗಿದ್ದು, ಸಣ್ಣಪುಟ್ಟ ಕೂಲಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT