ಬನಶಂಕರಿ ಪೊಲೀಸ್ ಠಾಣೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಯುವತಿ ಜತೆ ಅಸಭ್ಯ ವರ್ತನೆ ಕಿಡಿಗೇಡಿಗೆ ಹಿಗ್ಗಾಮುಗ್ಗಾ ಗೂಸಾ

ಕೆಲಸಕ್ಕೆ ಹೋಗಲು ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಿಡಿಗೇಡಿಯನ್ನು..

ಬೆಂಗಳೂರು: ಕೆಲಸಕ್ಕೆ ಹೋಗಲು ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಿಡಿಗೇಡಿಯನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಬನಶಂಕರಿ ಸಮೀಪದ ಕದಿರೇನ ಹಳ್ಳಿ ರಿಂಗ್ ರಸ್ತೆ ಬಸ್ ನಿಲ್ದಾಣದ ಬಳಿ ನಡೆದಿದೆ.

ಬಿಪಿಒ ಉದ್ಯೋಗಿಯಾಗಿರುವ ಯುವತಿ ರಾತ್ರಿ 10.30ಕ್ಕೆ ಕ್ಯಾಬ್‌ಗಾಗಿ ಕಾಯುತ್ತಿದ್ದಳು. ರಾತ್ರಿಯಾಗಿದ್ದ ಕಾರಣ ಜತೆಗೆ ಆಕೆಯ ತಂದೆಯೂ ಆಗಮಿಸಿದ್ದರು. ಈ ವೇಳೆ ಮೂವರು ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ. ಈ ಪೈಕಿ ಸತೀಶ್ ಎಂಬಾತ ಹಿಂದಿನಿಂದ ಬಂದು ಯುವತಿಯನ್ನು ಹಿಡಿದುಕೊಂಡು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಆಗ ಯುವತಿ ಕಿರುಚಿಕೊಂಡಿದ್ದು, ಜತೆಯಲ್ಲಿದ್ದ ತಂದೆ ಆತನನ್ನು ಹಿಡಿದುಕೊಂಡಿದ್ದಾರೆ. ಆಗ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಕಿಡಿಗೇಡಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸತೀಶನಿಗೆ ಪೆಟ್ಟು ಬೀಳುತ್ತಿದ್ದಂತೆ ಜತೆಗಿದ್ದ ಇಬ್ಬರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬನಶಂಕರಿ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ. ಸತೀಶ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ಹಾಗೂ ಮಣಿ ಎಂಬ ಇತರ ಇಬ್ಬರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಮೂವರೂ ಭುವನೇಶ್ವರಿ ನಗರ ನಿವಾಸಿಗಳಾಗಿದ್ದು, ಸಣ್ಣಪುಟ್ಟ ಕೂಲಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT