ಜನಾರ್ದನ ರೆಡ್ಡಿ ಮತ್ತು ಸುರೇಶ್ ಬಾಬು 
ಜಿಲ್ಲಾ ಸುದ್ದಿ

ಸುರೇಶ್ ಬಾಬು, ರೆಡ್ಡಿಗೆ ಜಾಮೀನು

ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ...

ಬೆಂಗಳೂರು: ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಕಂಪ್ಲಿ ಶಾಸಕ ಸುರೇಶ್ ಬಾಬು ಸೇರಿದಂತೆ 14 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ನೀಡಿದೆ.

ಆದರೆ, ಜನಾರ್ದನ ರೆಡ್ಡಿಗೆ ಮಾತ್ರ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಮತ್ತೊಂದೆಡೆ ಕಂಪ್ಲಿ ಶಾಸಕ ಸುರೇಶ್ ಬಾಬು ನ.28ರ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗವು ಸಾಧ್ಯತೆಗಳಿವೆ ಎನ್ನಲಾಗಿದೆ.

ರು.10 ಲಕ್ಷ ಮೊತ್ತದ ಭದ್ರತಾ ಠೇವಣಿ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ನೀಡಲಾಗಿದೆ. 2009 ರಿಂದ 2011ರ ಅವಧಿಯಲ್ಲಿ ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತುಮಾಡಿರುವ ಆರೋಪದಡಿ ಶಾಸಕ ಸುರೇಶ್ ಬಾಬು ಅವರನ್ನು 2013ರ ಸೆಪ್ಟಂಬರ್ 19ರಂದು ಸಿಬಿಐ ಅಧಿಕಾರಿಗಳು ಬಂಧಿಸಿದರು.

ಅಂದಿನಿಂದ ಪರಪ್ಪನ ಅಗ್ರಹಾಸ ಕಾರಾಗೃಹದಲ್ಲಿದ್ದ ಸುರೇಶ್‌ಬಾಬು ಅವರ ಜಾಮೀನನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

ಕೋಲ್ಕತ್ತಾ: ಕೇಂದ್ರ ಸಚಿವ ಸುಕಾಂತ ಮಜುಂದಾರ್ ಭಾಷಣ ಮಾತನಾಡುತ್ತಿದ್ದಾಗ ಭೂಕಂಪ: ಅನುಭವ ಹೇಗಿತ್ತು ಗೊತ್ತಾ? Video ನೋಡಿ..

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

SCROLL FOR NEXT