ಜನಾರ್ದನ ರೆಡ್ಡಿ ಮತ್ತು ಸುರೇಶ್ ಬಾಬು 
ಜಿಲ್ಲಾ ಸುದ್ದಿ

ಸುರೇಶ್ ಬಾಬು, ರೆಡ್ಡಿಗೆ ಜಾಮೀನು

ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ...

ಬೆಂಗಳೂರು: ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಕಂಪ್ಲಿ ಶಾಸಕ ಸುರೇಶ್ ಬಾಬು ಸೇರಿದಂತೆ 14 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ನೀಡಿದೆ.

ಆದರೆ, ಜನಾರ್ದನ ರೆಡ್ಡಿಗೆ ಮಾತ್ರ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಮತ್ತೊಂದೆಡೆ ಕಂಪ್ಲಿ ಶಾಸಕ ಸುರೇಶ್ ಬಾಬು ನ.28ರ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗವು ಸಾಧ್ಯತೆಗಳಿವೆ ಎನ್ನಲಾಗಿದೆ.

ರು.10 ಲಕ್ಷ ಮೊತ್ತದ ಭದ್ರತಾ ಠೇವಣಿ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ನೀಡಲಾಗಿದೆ. 2009 ರಿಂದ 2011ರ ಅವಧಿಯಲ್ಲಿ ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತುಮಾಡಿರುವ ಆರೋಪದಡಿ ಶಾಸಕ ಸುರೇಶ್ ಬಾಬು ಅವರನ್ನು 2013ರ ಸೆಪ್ಟಂಬರ್ 19ರಂದು ಸಿಬಿಐ ಅಧಿಕಾರಿಗಳು ಬಂಧಿಸಿದರು.

ಅಂದಿನಿಂದ ಪರಪ್ಪನ ಅಗ್ರಹಾಸ ಕಾರಾಗೃಹದಲ್ಲಿದ್ದ ಸುರೇಶ್‌ಬಾಬು ಅವರ ಜಾಮೀನನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT