ಕಿಸ್ ಆಫ್ ಲವ್ 
ಜಿಲ್ಲಾ ಸುದ್ದಿ

ಕಿಸ್ ಡೇ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ನೈತಿಕ ಪೊಲೀಸ್ ಗಿರಿ ವಿರೋಧಿಸಿ ದಿ. ಪುಟ್ಟಣ್ಣ ಚೆಟ್ಟಿ ಪುರಭವನದ...

ಬೆಂಗಳೂರು: ನೈತಿಕ ಪೊಲೀಸ್ ಗಿರಿ ವಿರೋಧಿಸಿ ದಿ. ಪುಟ್ಟಣ್ಣ ಚೆಟ್ಟಿ ಪುರಭವನದ ಮುಂದೆ ಭಾನುವಾರ ನಡೆಯಲಿರುವ ಕಿಸ್ ಆಫ್ ಲವ್ ಆಚರಣೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪುರಭವನದ ಮುಂದೆ ಆಚರಣೆ ನಡೆಸುವುದಾಗಿ ಆಯೋಜಕರು ಹೇಳಿದ್ದಾರೆ ಹೀಗಾಗಿ ಯಾವುದೇ ಕಾರಣಕ್ಕೂ ಕಿಸ್ ಡೇ ನಡೆಸಲು ಅನುಮತಿ ನೀಡಬಾರದು ಎಂದು ಅಬ್ರಹಾಂ ನಗರ ಪೊಲೀಸ್ ಆಯುಕ್ತ ಎಂ.ಎಸ್ ರೆಡ್ಡಿ ಅವರಿಗೂ ಪತ್ರ ಬರೆದಿದ್ದಾರೆ.

ಕಿಸ್ ಆಯೋಜಕರಿಗೆ ನಿರಾಕರಣೆ ಪತ್ರ ರವಾನೆ
ನಗರದಲ್ಲಿ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ಇಲ್ಲ ಎಂಬ ಬಗ್ಗೆ ಸಂಬಂಧಪಟ್ಟ ಆಯೋಜಕರಿಗೆ ನಿರಾಕರಣೆ ಪತ್ರವನ್ನು ಕಳುಹಿಸಲಾಗಿದೆ ಹಾಗೂ ಸಂದೇಶವನ್ನೂ ರವಾನೆ ಮಾಡಲಾಗಿದೆ. ಆದರೂ ಅವರು ಕಾನೂನು ಮೀರಿದರೆ ಕ್ರಮ ಖಚಿತ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಚರಣೆಗೆ ಅನುಮತಿ ನೀಡಬೇಕೇ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚಿಸಿ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಆಯೋಜಕರಿಗೆ ಪತ್ರ ತಲುಪಿದ ನಂತರ ಅವರು ಈ ಆಚರಣೆ ಮಾಡಿಯೇ ತೀರುತ್ತೇವೆ ಎಂದು ಮಾಧ್ಯಮದವರ ಬಳಿ ಹೇಳಿದ್ದಾರೆ. ಆದರೆ ಈ ಬಗ್ಗೆ ಪೊಲೀಸರ ಬಳಿ ಅವರು ಮಾತುಕತೆ ನಡೆಸಿಲ್ಲ. ಹಾಗಾಗಿ ನಮಗೆ ಆ ಬಗ್ಗೆ ತಿಳಿದಿಲ್ಲ ಎಂದು ತಿಳಿಸಿದರು.

ಒಂದು ವೇಳೆ ಮತ್ತೆ ಅರ್ಜಿ ಸಲ್ಲಿಸಿದರೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ನಡುವೆ ಅವರು ಆಚರಣೆ ಮಾಡಿದ್ದೇ ಆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಚೆಟ್ಟಿ ಕುಟುಂಬ ವಿರೋಧ
ಕಿಸ್ ಆಫ್ ಲವ್ ಕಾರ್ಯಕ್ರಮ ನಡೆಸುವುದಕ್ಕೆ ದಿ.ಪುಟ್ಟಣ್ಣ ಚೆಟ್ಟಿ ಕುಟಂಬ ಸದಸ್ಯರು ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಕಿಸ್ ಡೇ ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು. ಪುರಭವನದ ಮುಂದೆ ನಡೆಸುವುದಾಗಿ ಆಯೋಜಕರು ಹೇಳಿದ್ದಾರೆ. ಇಂಥ ಕಾರ್ಯಕ್ರಮಗಳಿಂದ ಪುಟ್ಟಣ್ಣ ಚೆಟ್ಟಿ ಅವರ ಗೌರವಕ್ಕೆ ಧಕ್ಕೆಯಾಗಲಿದೆ ಎಂದು ಕುಟುಂಬ ಸದಸ್ಯರು ನಗರ ಪೊಲೀಸ್ ಆಯುಕ್ತ ಎಂ.ಎಸ್ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT