ಕೈಗಾ ಅಣುವಿದ್ಯುತ್ ಕೇಂದ್ರ 
ಜಿಲ್ಲಾ ಸುದ್ದಿ

ಕೈಗಾದಲ್ಲಿ ಶುರುವಾಗತ್ತೆ ಮತ್ತೆರಡು ಘಟಕ

ಕಾರವಾರ: ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣುವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.

ಶುಕ್ರವಾರ ಕೈಗಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ 700 ಮೆಗಾವ್ಯಾಟ್ ಸಾಮರ್ಥ್ಯದ 5ನೇ ಮತ್ತು 6ನೇ ಘಟಕ ಆರಂಭಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಸದ್ಯ ಇರುವ ನಾಲ್ಕು ಘಟಕಗಳಿಂದ ಉತ್ಪಾದನೆ ಆಗುತ್ತಿರುವ 780 ಮೆ.ವ್ಯಾ.ವಿದ್ಯುತ್‌ನಲ್ಲಿ ರಾಜ್ಯಕ್ಕೆ ಶೇ.28 ವಿದ್ಯುತ್ ಪೂರೈಕೆ ಆಗುತ್ತಿದೆ. ಮುಂದಿನ ಎರಡು ಘಟಕ ಕಾರ್ಯಾರಂಭದ ನಂತರ ರಾಜ್ಯಕ್ಕೆ ಶೇ.50ರಷ್ಟು ವಿದ್ಯುತ್ ಲಭಿಸಲಿದೆ ಎಂದು ತಿಳಿಸಿದರು.

ಘಟಕದ ಆರಂಭಕ್ಕೆ ಕೇಂದ್ರ ಪರಿಸರ ಮಂತ್ರಾಲಯಕ್ಕೆ ಪರವಾನಗಿ ಕೋರಲಾಗಿದೆ. ರಾಜ್ಯ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಹಕಾರ ನೀಡುವುದಾಗಿ ತಿಳಿಸಿದೆ. ಕೈಗಾ ಪ್ರದೇಶದಲ್ಲಿ ಮುಂದಿನ ಎರಡು ಘಟಕಗಳಿಗಾಗಿ ಸ್ಥಳ ಗೊತ್ತುಪಡಿಸಲಾಗಿದೆ. ಮಣ್ಣಿನ ಪರೀಕ್ಷೆ, ವಾತಾವರಣ ಅಧ್ಯಯನ ಮುಂತಾದ ಬಹಳಷ್ಟು ಪರೀಕ್ಷೆಗಳು ನಡೆಯುತ್ತಿವೆ.

5ನೇ ಮತ್ತು 6ನೇ ಘಟಕದಿಂದ ಉತ್ಪಾದನೆ ಆಗುವ ವಿದ್ಯುತ್ ಸರಬರಾಜಿಗಾಗಿ ಹೊಸ ಮಾರ್ಗಗಳನ್ನು ಆರಂಭಿಸುವ ಅಥವಾ ಈಗಿರುವ ಮಾರ್ಗದಲ್ಲೇ ಸರಬರಾಜು ಸಾಧ್ಯವಾಗಿಸುವ ಬಗ್ಗೆ ಜಿಪಿಸಿ ಅಧ್ಯಯನ ನಡೆಸುತ್ತಿದೆ ಎಂದರು.

ಪರಿಸರ ಸ್ನೇಹಿ
ಕೈಗಾ ಅಧಿಕಾರಿ ಎಚ್.ಕೆ.ಸುಬ್ರಹ್ಮಣ್ಯ, ಎನ್‌ಪಿಸಿಐಎಲ್ ಕೈಗಾ ಬಗ್ಗೆ ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಅಣು ವಿದ್ಯುತ್ ಕೇಂದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ವಿಕಿರಣ ಬಿಡುಗಡೆಯಾಗುತ್ತದೆ ಹಾಗೂ ಇದರಿಂದ ಹೆಚ್ಚು ಕ್ಯಾನ್ಸರ್ ಹರಡುತ್ತದೆ ಎಂಬ ವದಂತಿ ಹೆಚ್ಚಾಗಿ ಹಬ್ಬಿದೆ. ಆದರೆ, ಕೈಗಾದಲ್ಲಿ ವಿಕಿರಣ ಸೋರಿಕೆಯಂತಹ ಯಾವುದೇ ಅವಘಡ ನಡೆಯುವ ಸಾಧ್ಯತೆ ಇಲ್ಲ.


ನೈಸರ್ಗಿಕವಾಗಿ ಬಿಡುಗಡೆಯಾಗುವ ವಿಕಿರಣ ಪ್ರಮಾಣ ಹೋಲಿಸಿದರೆ ಅಣುವಿದ್ಯುತ್ ಕೇಂದ್ರದಿಂದ ಹೊರ ಹೊಮ್ಮುವ ವಿಕಿರಣ ಪ್ರಮಾಣ ತೀರಾ ಕಡಿಮೆ ಇರುತ್ತದೆ ಎಂದರು. ವಾತಾವರಣದಲ್ಲಿ ಬಿಡುಗಡೆಯಾಗುವ ವಿಕಿರಣದ ಬಗ್ಗೆ ನಿರಂತರವಾಗಿ ಕಾರವಾರ ನಗರ ಹಾಗೂ ಬೆಂಗಳೂರಿನಲ್ಲಿ ಪರಿಸರ ಸಮೀಕ್ಷೆ ನಡೆಯುತ್ತಿರುತ್ತದೆ.

ಹೀಗಾಗಿ ಜನ ಆತಂಕ ಪಡುವ ಯಾವುದೇ ಅಗತ್ಯವಿಲ್ಲ. ಸುರಕ್ಷತೆ ಹಾಗೂ ವಿಶ್ವಾಸಾರ್ಹ ಅಗತ್ಯವಿಲ್ಲ. ಸುರಕ್ಷತೆ ಹಾಗೂ ವಿಶ್ವಾಸಾರ್ಹ ನಿರ್ವಹಣೆಗಾಗಿ ಕೈಗಾ ಘಟಕಕ್ಕೆ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. ಕೈಗಾ ಅಣುವಿದ್ಯುತ್ ಕೇಂದ್ರ ಪರಿಸರ ಮತ್ತು ಸಾರ್ವಜನಿಕ ರಕ್ಷಣೆಗೆ ಬದ್ಧವಾಗಿದೆ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT