ಜಿಲ್ಲಾ ಸುದ್ದಿ

ಕಳಂಕಿತ ಅಧಿಕಾರಿ ಮಂಜುನಾಥ್ ಗೆ ಬಡ್ತಿ

ಐಎಎಸ್ ಅಧಿಕಾರಿಯಾಗಿ ಬಡ್ತಿ ನೀಡುವಂತೆ ರಾಜ್ಯ ಸರ್ಕಾರ ಶಿಫಾರಸು...

ಬೆಂಗಳೂರು: ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಹೇಳುವ ಸರ್ಕಾರ, ಕಳಂಕಿತ ಅಧಿಕಾರಿಗಳಿಗೆ 'ಐಎಎಸ್‌' ಹಂತಕ್ಕೆ ಬಡ್ತಿ ನೀಡಲು ಮುಂದಾಗಿದೆ!

ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಹತ್ತಿರದ ಸಂಬಂಧಿ ಎನ್ನುವ ಒಂದೇ ಕಾರಣಕ್ಕೆ ಇಲಾಖೆಯಲ್ಲಿ ಸಾಕಷ್ಟು ಆರೋಪಗಳನ್ನು ಹೊಂದಿದ್ದರೂ ನಿಯಮ ಬಾಹಿರವಾಗಿ ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ.ವೈ.ಮಂಜುನಾಥ್ ಅವರನ್ನು ಐಎಎಸ್ ಅಧಿಕಾರಿಯಾಗಿ ಬಡ್ತಿ ನೀಡುವಂತೆ ಕೇಂದ್ರ ಲೋಕಸೇವಾ ಆಯೋಗಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

ಹಣಕಾಸು ಇಲಾಖೆ ಹಾಗೂ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ ವಿರೋಧವಿದ್ದರೂ ಮಂಜುನಾಥ್‌ರಿಗೆ ಸರ್ಕಾರ ದೊಡ್ಡ 'ಕಾಣಿಕೆ' ನೀಡಲು ಮುಂದಾಗಿದೆ. ಇಲಾಖೆಯಲ್ಲಿ ಅಲ್ಲದೆ, ಮದ್ಯದಂಗಡಿ ಮಾಲೀಕರಿಗೂ ಕಿರುಕುಳ ನೀಡದ ಆರೋಪವಿದೆ. ಅಂಗಡಿ ನವೀಕರಣಕ್ಕೆ ಲಂಚ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

11 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನು ಪಡೆದು ಹೊರಬಂದಿದ್ದರು. ಈ ಸಂದರ್ಭದಲ್ಲಿ ಸರ್ಕಾರದಿಂದ ಅಮಾನತು ಶಿಕ್ಷೆಗೂ ಮಂಜುನಾಥ್ ಒಳಗಾಗಿದ್ದರು. ಆದರೆ, ಸತೀಶ್ ಜಾರಕಿಹೊಳಿ ಅವರ ಪ್ರಭಾವದಿಂದ ಬಡ್ತಿಯೊಂದಿಗೆ ಬೆಂಗಳೂರು ದಕ್ಷಿಣ ನಂತರ ಬೆಳಗಾವಿ ವಿಭಾಗದ ಉಪ ಆಯುಕ್ತರಾಗಿ ಮಂಜುನಾಥ್ ನೇಮಕೊಂಡರು.

ಅವರ ವಿರುದ್ಧದ ಆರೋಪಗಳ ವಿಚಾರಣೆ ಬಾಕಿ ಇರುವಾಗ ಹಾಗೂ ಇಲಾಖೆಯಲ್ಲಿ ವಿರೋಧಗಳಿರುವಾಗಲೇ ಕೇಂದ್ರ ಲೋಕಸೇವಾ ಆಯೋಗಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಇದನ್ನು ಸರ್ಕಾರದ ಉನ್ನತ ಮೂಲಗಳು 'ಕನ್ನಡಪ್ರಭ'ಕ್ಕೆ ಖಾತ್ರಿಪಡಿಸಿವೆ.

ಪ್ರಮಾಣಿಕರಿಗೆ ವರ್ಗಾವಣೆ ಶಿಕ್ಷೆ ವಿಧಿಸುವ ಸರ್ಕಾರ, ಮಂಜುನಾಥ್ ಮೇಲೆ ಆರೋಪಗಳು ಬಂದಾಗಲೆಲ್ಲ ಉತ್ತಮ ಹುದ್ದೆಗಳನ್ನು ನೀಡಿ ವರ್ಗ ಮಾಡಿದೆ. ಈ ಕುರಿತಂತೆ ಸಚಿವ ಜಾರಕಿಹೊಳಿ ಅವರನ್ನು ಪ್ರಶ್ನಿಸಿದಾಗ, 'ಸರ್ಕಾರದ ಸಾಮಾನ್ಯ ವರ್ಗಾವಣೆಯಲ್ಲಿ ಅವರ ಹೆಸರೂ ಬಂದಿದೆ' ಎಂದು ಕೈ ತೊಳೆದುಕೊಂಡಿದ್ದರು.

ಆದರೆ ಕಳಂಕಿತ ಅಧಿಕಾರಿಯನ್ನು ಐಎಎಸ್ ಶ್ರೇಣಿಗೆ ಬಡ್ತಿ ನೀಡುವಂತೆ ಯುಪಿಎಸ್‌ಸಿಗೆ ಶಿಫಾರಸು ಮಾಡಲು ಅಬಕಾರಿ ಸಚಿವ ಹಾಗೂ ಸಂಬಂಧಿ ಜಾರಕಿಹೊಳಿಯಲ್ಲದೇ ಮತ್ಯಾರು ಕಾರಣರಾಗಲು ಸಾಧ್ಯ? ಎಂದು ಇಲಾಖೆ ಅಧಿಕಾರಿಗಳೇ ಪ್ರಶ್ನಿಸುತ್ತಿದ್ದಾರೆ.

ಇದು ಹೊಸತಲ್ಲ
ಈ ಹಿಂದೆ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರನ್ನು ಇದೇ ಸರ್ಕಾರ ಐಎಎಸ್ ಶ್ರೇಣಿಗೆ ಬಡ್ತಿ ನೀಡಲು ಮುಂದಾಗಿತ್ತು. ಆ ಅಧಿಕಾರಿ ವಿರುದ್ಧ ಸಾಕಷ್ಟು ಆರೋಪಗಳಿದ್ದರೂ ಸರ್ಕಾರ ಕ್ಯಾರೇ ಎನ್ನಲಿಲ್ಲ. ಮೂಲತಃ ಆ ಅಧಿಕಾರಿಗೆ ಕೆಎಎಸ್ ಕೂಡ ಆಗಿರಲಿಲ್ಲ. ಯುಪಿಎಸ್‌ಸಿಗೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಯ ಕರ್ಮಕಾಂಡಗಳ ದೂರು ಸಲ್ಲಿಕೆಯಾದ ಮೇಲೆ ಸರ್ಕಾರ ಹಿಂದೆ ಸರಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT