ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅಡ್ಡಾದಿಡ್ಡಿ ಚಲಿಸಿದ ಬಿಎಂಟಿಸಿ ಬಸ್

ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಅಡ್ಡಾದಿಡ್ಡಿ ಚಲಿಸಿದ ಬಿಎಂಟಿಸಿ...

ಬೆಂಗಳೂರು: ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಅಡ್ಡಾದಿಡ್ಡಿ ಚಲಿಸಿದ ಬಿಎಂಟಿಸಿ ಬಸ್, ಬಿ.ಆರ್.ವಿ ಜಂಕ್ಷನ್ ಸಮೀಪದ ಮಿಲಿಟರಿ ಕ್ಯಾಂಟೀನ್ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕ, ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಸ್‌ನಲ್ಲಿ ಪ್ರಯಾಣಿಕರು ಇರದಿದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾಂಪೌಂಡ್‌ಗೆ ಡಿಕ್ಕಿ ಹೊಡೆಯುವು ಮುನ್ನ ಬಿಎಂಟಿಸಿ ಬಸ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಎರಡೂ ಬಸ್‌ಗಳನ್ನೂ ವಶಪಡಿಸಿಕೊಂಡು ಚಾಲಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ ರು.6.50ರ ಸುಮಾರಿಗೆ ಬಿಎಂಟಿಸಿ ಬಸ್ ಕುಂಬ್ಳೆ ವೃತ್ತದಿಂದ ಬಿ.ಆರ್.ವಿ ಜಂಕ್ಷನ್ ಕಡೆಗೆ ಬರುತ್ತಿತ್ತು. ಈ ವೇಳೆ ಖಾಸಿಗ ಬಸ್ ಎದುರಿನಿಂದ ಏಕಾಏಕಿ ಬಂದಿದೆ. ಡಿಕ್ಕಿ ತಪ್ಪಿಸಲು ಯತ್ನಿಸಿದ ಎರಡೂ ಬಸ್‌ಗಳ ಚಾಲಕುರ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ಬಿಎಂಟಿಸಿ ಚಾಲಕ ವಾಹನವನ್ನು ಸಂಪೂರ್ಣ ಎಡಕ್ಕೆ ತೆಗೆದುಕೊಂಡಾಗ ಬಸ್ ಪಾದಚಾರಿ ಮಾರ್ಗವನ್ನೇರಿದೆ. ಬಳಿಕ ಮಿಲಿಟರಿ ಕ್ಯಾಂಟೀನ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸುಮಾರು 10 ಮೀಟರ್‌ನಷ್ಟು ಗೋಡೆಯನ್ನು ಕೆಡವಿ ನಿಂತುಕೊಂಡಿದೆ.

ಶಿವಾಜಿನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT