ಪ್ರಗತಿ ಕಾಲೇಜು (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಯಲಾಯಿತು ಪ್ರಗತಿ ಕಾಲೇಜು ಹಾಸ್ಟೆಲ್ ಅವ್ಯವಸ್ಥೆ..!

ಪ್ರಗತಿ ಕಾಲೇಜಿನ ಅವ್ಯವಸ್ಥೆಗಳು ಹೊರಗೆ ಬರುತ್ತಿದ್ದು, ಕೇವಲ ಒಂದು ಕೋಣೆಯಲ್ಲಿ 8 ರಿಂದ 10 ಮಂದಿ ವಿದ್ಯಾರ್ಥಿನಿಯರು ವಾಸಿಸುತ್ತಿದ್ದ ಅಂಶ ಬೆಳಕಿಗೆ ಬಂದಿದೆ...

ಬೆಂಗಳೂರು: ಪ್ರಗತಿ ಕಾಲೇಜಿನ ಅವ್ಯವಸ್ಥೆಗಳು ಹೊರಗೆ ಬರುತ್ತಿದ್ದು, ಕೇವಲ ಒಂದು ಕೋಣೆಯಲ್ಲಿ 8 ರಿಂದ 10 ಮಂದಿ ವಿದ್ಯಾರ್ಥಿನಿಯರು ವಾಸಿಸುತ್ತಿದ್ದ ಅಂಶ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿ ಗೌತಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷೆ ಮೊಟಮ್ಮ ಅವರು ಪ್ರಗತಿ ಕಾಲೇಜಿನ ಹಾಸ್ಟೆಲ್ ಗೆ ಭೇಟಿ ನೀಡಿದ್ದರು. ತಮ್ಮ ತಂಡದೊಂದಿಗೆ ಆಗಮಿಸಿದ್ದ ಮೋಟಮ್ಮ ಅವರು ಕಾಲೇಜಿನ ಹಾಸ್ಟೆಲ್ ಅವರಣವನ್ನು ಪರಿಶೀಲಿಸಿದರು. ಈ ವೇಳೆ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದ್ದು, ಕೇವಲ 1 ಕೋಣೆಯಲ್ಲಿ 8 ರಿಂದ 10 ಮಂದಿ ವಿದ್ಯಾರ್ಥಿನಿಯರು ವಾಸಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ತಂಗಲು ಬೇಕಿದ್ದ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿತ್ತು ಎಂದು ಮೋಟಮ್ಮ ಹೇಳಿದ್ದಾರೆ.

ಹಂದಿ ಗೂಡಂತಿದ್ದ ಮಹೇಶ್ ಕೋಠಡಿ
ಇನ್ನು ಇದೇ ಹಾಸ್ಟೆಲ್ ನಲ್ಲಿಯೇ ವಾಸವಿದ್ದ ಆರೋಪಿ ಮಹೇಶ್ ಕೊಠಡಿಗೂ ಮೋಟಮ್ಮ ಅವರು ಭೇಟಿ ನೀಡಿದ್ದು, ಆರೋಪಿ ಮಹೇಶನ ಕೊಠಡಿ ತೀರಾ ಚಿಕ್ಕದಾಗಿತ್ತು ಎಂದು ಹೇಳಿದ್ದಾರೆ. "ಹಳ್ಳಿ ಭಾಷೆಯಲ್ಲಿ ಹೇಳುವುದಾದರೆ ಆತನ ಕೊಠಡಿ ಹಂದಿ ಗೂಡಿನಂತಿತ್ತು. ಬಹುಶಃ ಇದು ಕೂಡ ಆತನ ಮನಃಸ್ಥಿತಿ ವ್ಯಗ್ರಗೊಳ್ಳಲು ಕಾರಣವಾಗಿರಬಹುದು" ಎಂದು ಮೋಟಮ್ಮ ಅಭಿಪ್ರಾಯಪಟ್ಟಿದ್ದಾರೆ.

ಮಹತ್ವದ ದಾಖಲೆಗಳ ವಶ
ಗುರುವಾರ ಮಧ್ಯಾಹ್ನ ಪ್ರಗತಿ ಕಾಲೇಜಿಗೆ ಭೇಟಿ ನೀಡಿದ್ದ ಕಾಡುಗೋಡಿ ಪೊಲೀಸರು, ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿ ಕಾಲೇಜು ಬಳಿ ಪ್ರತಿಭಟನೆ
ಇದೇ ವೇಳೆ ವಿದ್ಯಾರ್ಥಿನಿ ಗೌತಮಿ ಕೊಲೆಗೆ ಕಾಲೇಜಿನ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಇಂದು ಮಧ್ಯಾಹ್ನ ಪ್ರಗತಿ ಕಾಲೇಜಿನ ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೆ ಕಾಲೇಜಿನ ನಾಮಫಲಕವನ್ನು ಕಿತ್ತು ಬಿಸಾಡಿ ಅದಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT