ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಪೊಲೀಸ್ ಇಲಾಖೆ ಮುಕ್ತವಾಗಿ ಕೆಲಸ ಮಾಡಬೇಕು: ಸಿಎಂ ಕಿವಿಮಾತು

ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಯಾರ ಒತ್ತಡ ಕ್ಕೂ ಒಳಗಾಗದೇ ಪೊಲೀಸ್ ಇಲಾಖೆ ಮುಕ್ತವಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಸಾಮರಸ್ಯ ಕೆಡಿಸುವ, ಪ್ರಭಾವಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು...

ಬೆಂಗಳೂರು: ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಯಾರ ಒತ್ತಡ ಕ್ಕೂ ಒಳಗಾಗದೇ  ಪೊಲೀಸ್ ಇಲಾಖೆ ಮುಕ್ತವಾಗಿ ಕೆಲಸ  ಮಾಡಬೇಕು. ಸಮಾಜದಲ್ಲಿ ಸಾಮರಸ್ಯ ಕೆಡಿಸುವ, ಪ್ರಭಾವಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಕೋರಮಂಗಲ ಕೆಎಸ್‍ಆರ್‍ಪಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಪೊಲೀಸ್ ಕೆಲಸ ಅತ್ಯಂತ ಸವಾಲಿನ ಕೆಲಸ. ಹಲವು ಸಂದರ್ಭಗಳಲ್ಲಿ ಪೊಲೀಸರು ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಾರೆ. ಜತೆಗೆ ಕಠಿಣ ಶ್ರಮ, ವೃತ್ತಿಪರತೆ, ಸಮಯಪ್ರಜ್ಞೆ ಮತ್ತು ಜನಪರ ನಿಲುವುಗಳ ಪರವಾಗಿ ಪೊಲೀಸರು ಕೆಲಸ ಮಾಡಬೇಕು. ಅಶಿಸ್ತಿಗೆ ಅವಕಾಶ ನೀಡಬಾರದು. ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನತೆ ನೆಮ್ಮದಿ, ಶಾಂತಿಯಿಂದ ಬದುಕುತ್ತಿದ್ದಾರೆ ಎನ್ನುವುದೇ ಪೊಲೀಸ್ ಇಲಾಖೆ ಅಳತೆಗೋಲು. ಪೊಲೀಸರ ಬಗ್ಗೆ ಜನರಲ್ಲಿ ಭಯದ ಬದಲು ಗೌರವ ಇರಬೇಕು. ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ, ದೌರ್ಜನ್ಯಕ್ಕೆ ಒಳಗಾದ ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸಿದರೆ ಜನರಲ್ಲಿ ಪೊಲೀಸರ ಬಗ್ಗೆ ಗೌರವ ಮೂಡುತ್ತದೆ ಎಂದರು.

ಗಣನೀಯ ಸೇವೆ ಪರಿಗಣಿಸಿ ಪೊಲೀಸರಿಗೆ ನೀಡುವ ಮುಖ್ಯಮಂತ್ರಿ ಪದಕ ಕೈ ಶಾಸಕರು ಹಾಗೂ ಅಧಿಕಾರಿಗಳಿಂದ ಒತ್ತಡದ ಶಿಫಾರಸು ಬಂದಿತ್ತು. ಅದ್ಯಾವುದಕ್ಕೂ ಮಣಿಯದೆ ವೃತ್ತಿನಿಷ್ಠೆ ಮತ್ತು ಜನಪರ ಧೋರಣೆ ಹೊಂದಿದ ಸಿಬ್ಬಂದಿಗೆ ಮಾತ್ರವೇ ದಕ ನೀಡಿ ಗೌರವಿಸಲಾಗಿದೆ. ಪ್ರಾಮಾಣಿಕ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಜತೆಗೆ ಮತ್ತಷ್ಟು ಆತ್ಮ ಸ್ಥೈರ್ಯ ತುಂಬಲು ಸಿಎಂ ಪದಕ ನೀಡಿ ಗೌರವಿಸುವ ಪರಿಪಾಠವಿದೆ. ಆದರೆ, ಕೆಲವರು ಶಾಸಕರು ಮತ್ತು ಅಧಿಕಾರಿಗಳ ಮೂಲಕ ಸಿಎಂ ಪದಕ ಪಟ್ಟಿಗೆ ಹೆಸರು ಸೇರಿಸುವಂತೆ ಶಿಫಾರಸು ಮಾಡಿಸಿದರು. ಯಾರ ಪ್ರಭಾವಕ್ಕೂ ಸೊಪ್ಪು ಹಾಕದೆ ಪ್ರಮಾಣಿಕ ಸಿಬ್ಬಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಶಿಫಾರಸಿನಂತೆ ಪದಕ ನೀಡಿದ್ದರೆ ಎಲ್ಲರಿಗೂ ನೀಡಬೇಕಾಗುತ್ತದೆ ಎಂದು ವ್ಯಂಗ್ಯ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT