ಮೈತ್ರಿಯಾ ಗೌಡ 
ಜಿಲ್ಲಾ ಸುದ್ದಿ

ಬಿಜೆಪಿ ಸಮಾವೇಶ ಪ್ರವೇಶಿಸಲು ಮೈತ್ರಿಯಾ ಗೌಡ ಯತ್ನ: ಪೊಲೀಸರೊಂದಿಗೆ ವಾಗ್ವಾದ

ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದ ವೇಳೆ ನಟಿ ಮೈತ್ರಿಯಾ ಗೌಡ ಅವರು ಸಮಾವೇಶವನ್ನು...

ಬೆಂಗಳೂರು: ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದ ವೇಳೆ ನಟಿ ಮೈತ್ರಿಯಾ ಗೌಡ ಅವರು ಸಮಾವೇಶವನ್ನು ಪ್ರವೇಶಿಸಲು ಮುಂದಾಗಿದ್ದು, ಈ ವೇಳೆ ಮೈತ್ರಿಯಾ ಅವರನ್ನು ಪೊಲೀಸರು ತಡೆದು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.

ಸಮಾವೇಶದ ಸ್ಥಳಕ್ಕೆ ಮೈತ್ರೇಯಿ ಅವರು ಬರುತ್ತಿದ್ದಂತೆ ಪೊಲೀಸರು ಅವರನ್ನು ಹಿಂಬಾಲಿಸಿ ಪ್ರಶ್ನಿಸಿದರು. ಅಲ್ಲದೆ ಸಮಾವೇಶಕ್ಕೆ ಪ್ರವೇಶಿದಂತೆ ಪೊಲೀಸರು ತಡೆದ ಸಂದರ್ಭದಲ್ಲಿ ತಳ್ಳಾಟ ನೂಕಾಟ ಸಂಭವಿಸಿದೆ. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಂದಿರುವುದಾಗಿ ಹೇಳಿದ ಮೈತ್ರಿಯಾ ಸಮಾವೇಶ ನಡೆಯುತ್ತಿರುವ ಮೈದಾನಕ್ಕೆ ತೆರಳಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಮೈತ್ರಿಯಾ ಗೌಡ ಅವರು ಸಮಾವೇಶ ಸ್ಥಳಕ್ಕೆ ತೆರಳಲು ಅವಕಾಶ ನಿರಾಕರಿಸಿದ ಪೊಲೀಸರು ಅವರನ್ನು ಬಲವಂತವಾಗಿ ಅಲ್ಲಿಂದ ಕರೆದೊಯ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT