ಡಿಕೆ ರವಿ ಮತ್ತು ಕಾನೂನು ಸಚಿವ ಟಿಬಿ ಜಯಚಂದ್ರ 
ಜಿಲ್ಲಾ ಸುದ್ದಿ

ವಿಶೇಷ ಪ್ರಕರಣವಾದ್ದರಿಂದ ಷರತ್ತು ವಿಧಿಸಲಾಗಿತ್ತು: ಟಿಬಿ ಜಯಚಂದ್ರ

ಐಎಸ್ ಅಧಿಕಾರಿ ಡಿಕೆ ರವಿ ಅವರ ಪ್ರಕರಣ ವಿಶೇಷ ಪ್ರಕರಣವಾದ್ದರಿಂದ ಸಿಬಿಐಗೆ ಷರತ್ತು ವಿಧಿಸಲಾಗಿತ್ತು ಎಂದು ರಾಜ್ಯ ಕಾನೂನು ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ...

ನವದೆಹಲಿ: ಐಎಸ್ ಅಧಿಕಾರಿ ಡಿಕೆ ರವಿ ಅವರ ಪ್ರಕರಣ ವಿಶೇಷ ಪ್ರಕರಣವಾದ್ದರಿಂದ ಸಿಬಿಐಗೆ ಷರತ್ತು ವಿಧಿಸಲಾಗಿತ್ತು ಎಂದು ರಾಜ್ಯ ಕಾನೂನು ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ.

ರವಿ ಪ್ರಕರಣವನ್ನು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಧಿಸಿದ್ದ ಷರತ್ತುಗಳನ್ನು ತಿರಸ್ಕರಿಸಿರುವ ಸಿಬಿಐ ಇಂದು ಷರತ್ತು ಹಿಂಪಡೆಯದ ಹೊರತು ತನಿಖೆ ಸಾಧ್ಯವಿಲ್ಲ ಎಂದು ಹೇಳಿದೆ. ಈ ವಿಚಾರ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿದ್ದಂತೆಯೇ ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಕಾನೂನು ಸಚಿವ ಟಿಬಿ ಜಯಚಂದ್ರ ಅವರು, ಡಿಕೆ ರವಿ ನಿಗೂಢ ಸಾವು ಪ್ರಕರಣ ವಿಶೇಷ ಪ್ರಕರಣವಾದ್ದರಿಂದ ಸಿಬಿಐ ಅಧಿಕಾರಿಗಳಿಗೆ ಷರತ್ತು ವಿಧಿಸಲಾಗಿತ್ತು. ರವಿ ಪ್ರಕರಣವನ್ನು ವರ್ಷಾನುಗಟ್ಟಲೆ ತನಿಖೆಗೊಳಪಡಿಸುವುದು ಅನಗತ್ಯ. ಹೀಗಾಗಿ 3 ತಿಂಗಳ ಗಡುವು ನೀಡಲಾಗಿತ್ತು ಎಂದು ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಜಯಚಂದ್ರ ಅವರು, "ಡಿಕೆ ರವಿ ಪ್ರಕರಣ ವಿಶೇಷ ಪ್ರಕರಣವಾದ್ದರಿಂದ ಸಿಬಿಐ ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಲಾಗಿತ್ತು. ಅಲ್ಲದೆ ಡಿಕೆ ರವಿ  ಪ್ರಕರಣದಲ್ಲಿ  ವರ್ಷಾನುಗಟ್ಟಲೆ ತನಿಖೆ ನಡೆಸುವುದು ಅನಗತ್ಯ. ಹೀಗಾಗಿ ಸಿಬಿಐಗೆ ಷರತ್ತು ವಿಧಿಸಲಾಗಿತ್ತು. ಅವಧಿ ಕುರಿತಂತೆ ಸಿಬಿಐ ವಿಸ್ತರಣೆ ಬೇಕು ಎಂದು ಕೇಳಿದರೆ ಆ ಬಗ್ಗೆ ಚಿಂತಿಸಬಹುದು. ಕಾನೂನು ತಜ್ಞರು ಹಾಗೂ ಸಂಪುಟದಲ್ಲಿ ಚರ್ಚಿಸಿ ಸರ್ಕಾರದ ನಿರ್ಧಾವನ್ನು ಪ್ರಕಟಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT