ಗೌತಮಿ 
ಜಿಲ್ಲಾ ಸುದ್ದಿ

ಪ್ರಗತಿ ಕಾಲೇಜು ರದ್ದು: ಗೌತಮಿ ತಂದೆ ಆಗ್ರಹ

ಪಿಯುಸಿ ವಿದ್ಯಾರ್ಥಿನಿ ಗೌತಮಿ ಹತ್ಯೆ ಮಾಡಿದ್ದ ಆರೋಪಿ ಮಹೇಶ್‍ನನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಗತಿ ಕಾಲೇಜು ಮಾನ್ಯತೆ...

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿ ಗೌತಮಿ ಹತ್ಯೆ ಮಾಡಿದ್ದ ಆರೋಪಿ ಮಹೇಶ್‍ನನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಗತಿ ಕಾಲೇಜು ಮಾನ್ಯತೆ ರದ್ದು ಮಾಡಬೇಕೆಂದು ಹಾಗೂ ಪ್ರಕರಣದ ನ್ಯಾಯಯುತ ತನಿಖೆ ಮಾಡುವ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದು ಗೌತಮಿ ತಂದೆ ರಮೇಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಲ್ಲೇಶ್ವರದ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂಭಾಗ ಸೋಮವಾರ ಗೌತಮಿ ತಂದೆ ರಮೇಶ್ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, `ಲಕ್ಷಾಂತರ ರುಪಾಯಿ ಶುಲ್ಕ ಪಡೆದು ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಮತ್ತು ಭದ್ರತೆ ಒದಗಿಸದೆ ಇರುವ ಪ್ರಗತಿ ಕಾಲೇಜು ಮಾನ್ಯತೆ ರದ್ದು ಮಾಡಬೇಕು. ಇದು ಹೀಗೆಯೇ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ಗೌತಮಿ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಈ ನಡುವೆ, ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯನ್ನು ಕಾಲೇಜು ಆರಂಭಿಸಿದೆ. ಸರ್ಕಾರ ಈ ವಿಷಯದಲ್ಲಿ ಮೌನವಹಿಸಿದರೆ, ವಿದ್ಯಾರ್ಥಿ ಗಳ ಭವಿಷ್ಯಕ್ಕೆ ತೊಂದರೆಯಾಗುವುದು ಕಟ್ಟಿಟ್ಟ ಬುತ್ತಿ. ಆದ್ದರಿಂದ ಈ
ಕಾಲೇಜಿನ ಮಾನ್ಯತೆ ರದ್ದು ಮಾಡಿ ಅಲ್ಲಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ವರ್ಗಾವಣೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನಂತರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದ ಗೌತಮಿ ಪೋಷಕರು ಹೆಚ್ಚುವರಿ ಪೊಲೀಸ್ ಆಯುಕ್ತ ಪಿ. ಹರಿಶೇಖರನ್ ಭೇಟಿ ಮಾಡಿ, ತನಿಖೆ ಚುರುಕುಗೊಳಿಸುವಂತೆ ಹಾಗೂ ಆರೋಪಿ ಮಹೇಶ್‍ಗೆ ತುರ್ತು ಶಿಕ್ಷೆಯಾಗುವಂತೆ ವಿಶೇಷ ನ್ಯಾಯಾಲಯ ಮತ್ತು ವಕೀಲರನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.

ಹಿನ್ನೆಲೆ: ಮಾ.31 ರಂದು ಕಾಡುಗೋಡಿಯ ಪ್ರಗತಿ ಕಾಲೇಜಿನ ಹಾಸ್ಟೆಲ್‍ನಲ್ಲಿ ಪಾವಗಡ ಮೂಲದ ವಿದ್ಯಾರ್ಥಿನಿ ಗೌತಮಿ ಹಾಗೂ ಈಕೆಯ ಸ್ನೇಹಿತೆ ಸಿರಿಶಾಳ ಮೇಲೆ ಅದೇ ಕಾಲೆಜಿನ ಅಟೆಂಡರ್ ಮೂಲತಃ ಶಿವಮೊಗ್ಗದವನಾದ ಮಹೇಶ್ ಗುಂಡಿನ ದಾಳಿ ನಡೆಸಿದ್ದನು. ಇದರಿಂದ ಗೌತಮಿ ಸ್ಥಳದಲ್ಲೇ ಮೃತಪಟ್ಟರೆ, ಗಂಬಿsರವಾಗಿ ಗಾಯಗೊಂಡಿದ್ದ ಸಿರಿಶಾ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಗೆ ದ್ರವ ರೂಪದ ಆಹಾರ ನೀಡುವಂತೆ ವೈದ್ಯರು ತಿಳಿಸಿದ್ದಾರೆ ಎಂದು ಸಿರಿಶಾ ತಂದೆ ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT