ಕೆ.ಆರ್. ಮಾರುಕಟ್ಟೆ 
ಜಿಲ್ಲಾ ಸುದ್ದಿ

ಕೆ.ಆರ್.ಮಾರ್ಕೆಟ್ ಬಂದ್: ವ್ಯಾಪಾರ-ವಹಿವಾಟು ಸ್ಥಗಿತ, ಗ್ರಾಹಕರ ಪರದಾಟ

ಸಿಲಿಕಾನ್ ಸಿಟಿಯ ಕೇಂದ್ರ ಭಾಗವಾಗಿರುವ ಕೃಷ್ಣ ರಾಜೇಂದ್ರ ಮಾರ್ಕೆಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳ ತೆರವಿಗೆ ಆಗ್ರಹಿಸಿ ಸ್ಥಳೀಯ ಸಂಘಟನೆಗಳು ಮಾರುಕಟ್ಟೆಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದಿವೆ...

ಬೆಂಗಳೂರು: ಸಿಲಿಕಾನ್ ಸಿಟಿಯ ಕೇಂದ್ರ ಭಾಗವಾಗಿರುವ ಕೃಷ್ಣ ರಾಜೇಂದ್ರ ಮಾರ್ಕೆಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳ ತೆರವಿಗೆ ಆಗ್ರಹಿಸಿ ಸ್ಥಳೀಯ ಸಂಘಟನೆಗಳು ಮಾರ್ಕೆಟ್ ಬಂದ್ ಮಾಡಿದ ಪರಿಣಾಮ ಗ್ರಾಹಕರು ಪರದಾಡುವಂತಾಗಿತ್ತು.

ಇತ್ತೀಚೆಗಷ್ಟೇ ಕೆ.ಆರ್. ಮಾರುಕಟ್ಟೆಯ ನೆಲಮಾಳಿಗೆಯಲ್ಲಿ ಸುಮಾರು 18 ಹೊಸ ಅಂಗಡಿಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ಹೊಸ ಅಂಗಡಿಗಳ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಳೆಯ ಅಂಗಡಿ ಮಾಲೀಕುರ ಅಂಗಡಿಗಳಿಗೆ ಗಾಳಿ ಬೆಳಕಿನ ಸಮಸ್ಯೆ ಉಂಟಾಗಿದೆ. ಅಲ್ಲದೆ, ನಿರ್ಮಾಣಗೊಂಡ ಅಂಗಡಿಗಳು ಅಕ್ರಮವಾಗಿ ನಿರ್ಮಿತಗೊಂಡಿರುವಂತಹವು, ಹೀಗಾಗಿ ಈ ಅಕ್ರಮ ಮಳಿಗೆಗಳನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿದ್ದವು. ಅಲ್ಲದೆ ಬಿಬಿಎಂಪಿಗೂ ಕೂಡ ಈ ಬಗ್ಗೆ ದೂರು ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬಿಬಿಎಂಪಿ ಅಧಿಕಾರಿಗಳು ಅಂಗಡಿಗಳ ತೆರವಿಗೆ ಮುಂದಾಗಿದ್ದರಾದರೂ, ಹೊಸಮಳಿಗೆಗಳ ಮಾಲೀಕರ ತೀವ್ರ ವಿರೋಧದಿಂದಾಗಿ ಅದು ಸಾಧ್ಯವಾಗಿರಲಿಲ್ಲ. ತಮ್ಮ ಅಂಗಡಿಗಳು ಅನಧಿಕೃತವಲ್ಲ. ನ್ಯಾಯಾಲಯವೇ ನಮಗೆ ಅನುಮತಿ ನೀಡಿದ್ದು, ಈ ಬಗ್ಗೆ ನಮ್ಮ ಬಳಿ ಬಿಬಿಎಂಪಿ ದಾಖಲೆಗಳು ಕೂಡ ಇವೆ ಎಂದು ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದರು. ಇನ್ನು ಕೆಲವು ವ್ಯಾಪಾರಸ್ಥರು ಅಧಿಕಾರಿಗಳು ತೆರವು ಕಾರ್ಯಾಚಾರಣೆಯನ್ನು ಕೂಡಲೇ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದರು.

ನಂತರ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಬಿಬಿಎಂಪಿ ಅಧಿಕಾರಿಗಳು ತೆರವು ಕಾರ್ಯಾಚರಣೆಯಿಂದ ಹಿಂದೆ ಬರುವಂತಾಯಿತು. ಅಧಿಕಾರಿಗಳ ಈ ಕ್ರಮಕ್ಕೆ ತೀವ್ರ ರೀತಿಯಾಗಿ ಅಸಮಾಧಾನಗೊಂಡ ಮಾರುಕಟ್ಟೆಯ ವ್ಯಾಪಾರಿಗಳು ಇಂದು ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದು ಬಂದ್ ಆಚರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT