ಜಿಲ್ಲಾ ಸುದ್ದಿ

ದಾಯಾದಿ ಕಲಹ ಕೊಲೆಯಲ್ಲಿ ಅಂತ್ಯ

ನಿವೇಶನ ಹಂಚಿಕೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತಮ್ಮನೇ ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಚರಕನಹಳ್ಳಿಯಲ್ಲಿ ಬುಧವಾರ ಹಾಡಹಗಲೇ ನಡೆದಿದೆ...

ಬೆಂಗಳೂರು: ನಿವೇಶನ ಹಂಚಿಕೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತಮ್ಮನೇ ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಚರಕನಹಳ್ಳಿಯಲ್ಲಿ ಬುಧವಾರ ಹಾಡಹಗಲೇ ನಡೆದಿದೆ.

ಘಟನೆ ನಡೆದ ಕೇವಲ ಒಂದು ಗಂಟೆ ಅವಧಿಯಲ್ಲಿ ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಕಾಚರಕನಹಳ್ಳಿಯ 9ನೇ ಕ್ರಾಸ್ ನಿವಾಸಿ, ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಮಂಜ ಅಲಿಯಾಸ್ ಕೋಳಿ ಮಂಜ(35) ಕೊಲೆಯಾದವ. ಆರೋಪಿ ಮರಳು ಲಾರಿ ಮಾಲೀಕ ಮಧು (27) ಬಂಧಿತ. ಮತ್ತಿಬ್ಬರು ಆರೋಪಿಗಳಾದ ಕಿರಣ್ ಹಾಗೂ ನವೀನ್ ಪರಾರಿಯಾಗಿದ್ದು, ಶೋಧ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಥಿಕಾರಿಗಳು, ಮಂಜ ಮತ್ತು ಮಧು ಸಹೋದರರು. ಸುಮಾರು 5 ಸಾವಿರ ಚದರ ಅಡಿ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಮಾಡಲಾಗಿತ್ತು. ಆದರೆ, ಇದರಿಂದ ಸಮಾಧಾನವಾಗದ ಮಧು ಹೆಚ್ಚು ನೀಡುವಂತೆ ಒತ್ತಾಯಿಸುತ್ತಿದ. ಆದರೆ, ಪೋಷಕರು ಅದಕ್ಕೆ ನಿರಾಕರಿಸಿದ್ದರಿಂದ ಆಸ್ತಿ ಹಂಚಿಕೆ ಕುರಿತು ನ್ಯಾಯಾಲಯದಲ್ಲೆ ಸ್ಟೇ ತಂದಿದ್ದ. ಈ ವಿಚಾರವಾಗಿ ಅವರಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸಾಕಷ್ಟು ಬಾರಿ ಕುಟುಂಬದ ಹಿರಿಯ ಸದಸ್ಯರು ಇಬ್ಬರ ನಡುವೆ ಹಲವು ಬಾರಿ ಸಂಧಾನ ನಡೆಸಿದ್ದರೂ ಪ್ರಯೋಜನ ವಾಗಿರಲಿಲ್ಲ. ಹೀಗಿರುವಾಗ ಬುಧವಾರ ಬೆಳಗ್ಗೆ ಮಧು ತನ್ನ ಅಣ್ಣ ಮಂಜನಿಗೆ ಕರೆ ಮಾಡಿ ಆಸ್ತಿ ವಿಷಯ ಮಾತನಾಡಲು ಭೇಟಿ ಮಾಡುವಂತೆ ತಿಳಿಸಿದ್ದ.

ಆರೋಪಿ ಮನೆಯಿಂದ ಸುಮಾರು 100 ಮೀ. ದೂರದಲ್ಲಿರುವ ಗಣೇಶನ ಬಳಿ ಇರುವ ಟೀ ಅಂಗಡಿ ಬಳಿ ಬರುವಂತೆ ತನ್ನ ಅಣ್ಣನಿಗೆ ಹೇಳಿದ್ದ. ತಮ್ಮನ ಸೂಚನೆಯಂತೆ ಮಂಜ ಅಂಗಡಿ ಬಳಿ ಹೋದಾಗ ಏಕಾಏಕಿ ಜಗಳ ತೆಗೆದ ಮಧು ಮಾರಕಾಸ್ತ್ರಗಳಿಂದ ಅಣ್ಣ ಮಂಜನ ತಲೆ, ಹೊಟ್ಟೆ, ಕೈ-ಕಾಲಿಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ತೀವ್ರ ಗಾಯಗೊಂಡು ರಕ್ತಸ್ರಾವದಿಂದ ಕುಸಿದುಬಿದ್ದ ಗಾಯಾಳನ್ನು(ಮಂಜ) ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆದರೆ, ಮಾರ್ಗಮಧ್ಯದಲ್ಲಿ ಆತ ಕೊನೆಯುಸಿರೆಳೆದಿದ್ದಾನೆ.
.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಸಹೋದರರ ಕಲಹದಿಂದ ಬೇಸತ್ತ ಪೋಷಕರು ಅನಾರೋಗ್ಯದಿಂದ ಬಳಲುತಿತದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT