ಜಿಲ್ಲಾ ಸುದ್ದಿ

ದಾಯಾದಿ ಕಲಹ ಕೊಲೆಯಲ್ಲಿ ಅಂತ್ಯ

ನಿವೇಶನ ಹಂಚಿಕೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತಮ್ಮನೇ ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಚರಕನಹಳ್ಳಿಯಲ್ಲಿ ಬುಧವಾರ ಹಾಡಹಗಲೇ ನಡೆದಿದೆ...

ಬೆಂಗಳೂರು: ನಿವೇಶನ ಹಂಚಿಕೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತಮ್ಮನೇ ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಚರಕನಹಳ್ಳಿಯಲ್ಲಿ ಬುಧವಾರ ಹಾಡಹಗಲೇ ನಡೆದಿದೆ.

ಘಟನೆ ನಡೆದ ಕೇವಲ ಒಂದು ಗಂಟೆ ಅವಧಿಯಲ್ಲಿ ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಕಾಚರಕನಹಳ್ಳಿಯ 9ನೇ ಕ್ರಾಸ್ ನಿವಾಸಿ, ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಮಂಜ ಅಲಿಯಾಸ್ ಕೋಳಿ ಮಂಜ(35) ಕೊಲೆಯಾದವ. ಆರೋಪಿ ಮರಳು ಲಾರಿ ಮಾಲೀಕ ಮಧು (27) ಬಂಧಿತ. ಮತ್ತಿಬ್ಬರು ಆರೋಪಿಗಳಾದ ಕಿರಣ್ ಹಾಗೂ ನವೀನ್ ಪರಾರಿಯಾಗಿದ್ದು, ಶೋಧ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಥಿಕಾರಿಗಳು, ಮಂಜ ಮತ್ತು ಮಧು ಸಹೋದರರು. ಸುಮಾರು 5 ಸಾವಿರ ಚದರ ಅಡಿ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಮಾಡಲಾಗಿತ್ತು. ಆದರೆ, ಇದರಿಂದ ಸಮಾಧಾನವಾಗದ ಮಧು ಹೆಚ್ಚು ನೀಡುವಂತೆ ಒತ್ತಾಯಿಸುತ್ತಿದ. ಆದರೆ, ಪೋಷಕರು ಅದಕ್ಕೆ ನಿರಾಕರಿಸಿದ್ದರಿಂದ ಆಸ್ತಿ ಹಂಚಿಕೆ ಕುರಿತು ನ್ಯಾಯಾಲಯದಲ್ಲೆ ಸ್ಟೇ ತಂದಿದ್ದ. ಈ ವಿಚಾರವಾಗಿ ಅವರಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸಾಕಷ್ಟು ಬಾರಿ ಕುಟುಂಬದ ಹಿರಿಯ ಸದಸ್ಯರು ಇಬ್ಬರ ನಡುವೆ ಹಲವು ಬಾರಿ ಸಂಧಾನ ನಡೆಸಿದ್ದರೂ ಪ್ರಯೋಜನ ವಾಗಿರಲಿಲ್ಲ. ಹೀಗಿರುವಾಗ ಬುಧವಾರ ಬೆಳಗ್ಗೆ ಮಧು ತನ್ನ ಅಣ್ಣ ಮಂಜನಿಗೆ ಕರೆ ಮಾಡಿ ಆಸ್ತಿ ವಿಷಯ ಮಾತನಾಡಲು ಭೇಟಿ ಮಾಡುವಂತೆ ತಿಳಿಸಿದ್ದ.

ಆರೋಪಿ ಮನೆಯಿಂದ ಸುಮಾರು 100 ಮೀ. ದೂರದಲ್ಲಿರುವ ಗಣೇಶನ ಬಳಿ ಇರುವ ಟೀ ಅಂಗಡಿ ಬಳಿ ಬರುವಂತೆ ತನ್ನ ಅಣ್ಣನಿಗೆ ಹೇಳಿದ್ದ. ತಮ್ಮನ ಸೂಚನೆಯಂತೆ ಮಂಜ ಅಂಗಡಿ ಬಳಿ ಹೋದಾಗ ಏಕಾಏಕಿ ಜಗಳ ತೆಗೆದ ಮಧು ಮಾರಕಾಸ್ತ್ರಗಳಿಂದ ಅಣ್ಣ ಮಂಜನ ತಲೆ, ಹೊಟ್ಟೆ, ಕೈ-ಕಾಲಿಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ತೀವ್ರ ಗಾಯಗೊಂಡು ರಕ್ತಸ್ರಾವದಿಂದ ಕುಸಿದುಬಿದ್ದ ಗಾಯಾಳನ್ನು(ಮಂಜ) ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆದರೆ, ಮಾರ್ಗಮಧ್ಯದಲ್ಲಿ ಆತ ಕೊನೆಯುಸಿರೆಳೆದಿದ್ದಾನೆ.
.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಸಹೋದರರ ಕಲಹದಿಂದ ಬೇಸತ್ತ ಪೋಷಕರು ಅನಾರೋಗ್ಯದಿಂದ ಬಳಲುತಿತದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT