ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಣವಿಕ್ರಮ ಪ್ರದರ್ಶನದ ವೇಳೆ ರನ್ನ ಟೀಸರ್ ಪ್ರದರ್ಶನ: ಪ್ರೇಕ್ಷಕರಿಂದ ದಾಂಧಲೆ

ಪುನೀತ್ ರಾಜ್ ಕುಮಾರ್ ಅಭಿನಯದ ರಣವಿಕ್ರಮ ಚಿತ್ರ ಪ್ರದರ್ಶನದ ವೇಳೆ ರನ್ನ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದನ್ನು ಆಕ್ಷೇಪಿಸಿ, ಪ್ರೇಕ್ಷಕರು ಸಂತೋಷ್ ಚಿತ್ರಮಂದಿರದಲ್ಲಿ ದಾಂಧಲೆ ಎಬ್ಬಿಸಿದ್ದಾರೆ...

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ರಣವಿಕ್ರಮ ಚಿತ್ರ ಪ್ರದರ್ಶನದ ವೇಳೆ ರನ್ನ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದನ್ನು ಆಕ್ಷೇಪಿಸಿ, ಪ್ರೇಕ್ಷಕರು ಸಂತೋಷ್ ಚಿತ್ರಮಂದಿರದಲ್ಲಿ ದಾಂಧಲೆ ಎಬ್ಬಿಸಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಕೆಂಪೇಗೌಡ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ರಣವಿಕ್ರಮ ಚಿತ್ರ ಪ್ರದರ್ಶನ ಕಾಣುತ್ತಿದ್ದು, ಇಂಟರ್ ವಲ್ ವೇಳೆ ನಟ ಸುದೀಪ್ ಅಭಿನಯದ ರನ್ನ ಚಿತ್ರದ ಟೀಸರ್ ಪ್ರದರ್ಶನ ಮಾಡಿದ್ದರಿಂದ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಗಲಾಟೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಸಿನಿಮಾದ ಇಂಟರ್ ವಲ್ ನಲ್ಲಿ ರನ್ನ ಚಿತ್ರದ ಟೀಸರ್ ಪ್ರದರ್ಶನ ಮಾಡುತ್ತಿದ್ದಾಗ, ರೊಚ್ಚಿಗೆದ್ದ ಅಭಿಮಾನಿಗಳು ಪ್ರೊಜೆಕ್ಟರ್ ನತ್ತ ಬಾಟಲಿ ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕಿಟಕಿ ಗಾಜುಗಳೆಲ್ಲಾ ಪುಡಿ, ಪುಡಿಯಾದವು.

ಕೂಡಲೇ ಎಚ್ಚೆತ್ತ ಥಿಯೇಟರ್ ಸಿಬ್ಬಂದಿಗಳು ರನ್ನ ಸಿನಿಮಾದ ಟೀಸರ್ ಪ್ರದರ್ಶನ ಸ್ಥಗಿತಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಾತಾವರಣ ತಿಳಿಯಾದ ನಂತರ ಚಿತ್ರಮಂದಿರದ ಸಿಬ್ಬಂದಿಗಳು ಮತ್ತೆ ರಣವಿಕ್ರಮ ಸಿನಿಮಾ ಪ್ರದರ್ಶನ ಮುಂದುವರಿಸಿದ್ದಾರೆ.

ರಣವಿಕ್ರಮ ಚಿತ್ರವನ್ನು ಜಯಣ್ಣ ಕಂಬೈನ್ಸ್ ನಡಿ ಜಯಣ್ಣ ಮತ್ತು ಭೋಗೇಂದ್ರ ಕೂಡಿ ನಿರ್ಮಿಸಿದ್ದು, ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್, ಅದಾಶರ್ಮಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸಿರುವುದು ಪವನ್ ಒಡೆಯರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT