ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ 
ಜಿಲ್ಲಾ ಸುದ್ದಿ

ವಿಭಜನೆಗೆ ಕರವೇ ವಿರೋಧ

ಬಿಬಿಎಂಪಿ ವಿಭಜನೆ ಮಾಡುವುದರ ಹಿಂದೆ ಕನ್ನಡಿಗರನ್ನು ಮೂಲೆಗುಂಪು ಮಾಡುವ ಹುನ್ನಾರ ಅಡಗಿದೆ ಎಂದು...

ಬೆಂಗಳೂರು: ಬಿಬಿಎಂಪಿ ವಿಭಜನೆ ಮಾಡುವುದರ ಹಿಂದೆ ಕನ್ನಡಿಗರನ್ನು ಮೂಲೆಗುಂಪು ಮಾಡುವ ಹುನ್ನಾರ ಅಡಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ದೂರಿದ್ದಾರೆ.

ಬಿಬಿಎಂಪಿ ವಿಭಜನೆ ವಿರೋಧಿಸಿ ಶುಕ್ರವಾರ ಸಂಜೆ ನಗರದ ಪುರಭವನದ ಮುಂಭಾಗದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕರ್ನಾಟಕ ರಕ್ಷಣಾ ವೇದಿಕೆಯು ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿರುವ ಕೆಲವು ಐಟಿ ಉದ್ಯಮಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಆಗಬೇಕಿದೆ. ಅವರೇ ಸರ್ಕಾರದ ಮೇಲೆ ಒತ್ತಡ ತಂದಿರುವುದರ ಫಲವಾಗಿ ಪಾಲಿಕೆಯನ್ನು ಮೂರು ಭಾಗವಾಗಿ ವಿಭಜಿಸುವ ಪ್ರಯತ್ನ ನಡೆದಿದೆ. ಇವರ ತಂತ್ರಗಳಿಂದ ಪಾಲಿಕೆ ವಿಭಜನೆಯಾದರೆ, ನಗರದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಸುಗಮ ಆಡಳಿತದ ನೆಪಮಾಡಿಕೊಂಡು ಸುಗ್ರಿವಾಜ್ಞೆ ತರುವ ಮೂಲಕ ಪಾಲಿಕೆಯನ್ನು ವಿಭಜನೆ ಮಾಡಲು ಹೊರಟಿದೆ. ಈ ಆದೇಶಕ್ಕೆ ರಾಜ್ಯಪಾಲರು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಪಿ. ಆಂಜನಪ್ಪ, ಬಿ. ಸಣ್ಣೀರಪ್ಪ, ನಾಗೇಂದ್ರ ಬಾಬು, ಸತೀಶ್ ಗೌಡ, ಹೇಮಲತಾ, ಸತೀಶ್ ಭಾಗವಹಿಸಿದ್ದರು. ಮೆರವಣಿಗೆ ನಂತರ ನಿಯೋಗದಲ್ಲಿ ರಾಜಭವನಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

'ಮುಂದುವರಿಯಲು ನಿರ್ಧರಿಸಿದ್ದೇನೆ': ಸ್ಮೃತಿ ಮಂಧಾನ ಬಳಿಕ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಮಾತು!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

SCROLL FOR NEXT