ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ 
ಜಿಲ್ಲಾ ಸುದ್ದಿ

ವಿಭಜನೆಗೆ ಕರವೇ ವಿರೋಧ

ಬಿಬಿಎಂಪಿ ವಿಭಜನೆ ಮಾಡುವುದರ ಹಿಂದೆ ಕನ್ನಡಿಗರನ್ನು ಮೂಲೆಗುಂಪು ಮಾಡುವ ಹುನ್ನಾರ ಅಡಗಿದೆ ಎಂದು...

ಬೆಂಗಳೂರು: ಬಿಬಿಎಂಪಿ ವಿಭಜನೆ ಮಾಡುವುದರ ಹಿಂದೆ ಕನ್ನಡಿಗರನ್ನು ಮೂಲೆಗುಂಪು ಮಾಡುವ ಹುನ್ನಾರ ಅಡಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ದೂರಿದ್ದಾರೆ.

ಬಿಬಿಎಂಪಿ ವಿಭಜನೆ ವಿರೋಧಿಸಿ ಶುಕ್ರವಾರ ಸಂಜೆ ನಗರದ ಪುರಭವನದ ಮುಂಭಾಗದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕರ್ನಾಟಕ ರಕ್ಷಣಾ ವೇದಿಕೆಯು ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿರುವ ಕೆಲವು ಐಟಿ ಉದ್ಯಮಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಆಗಬೇಕಿದೆ. ಅವರೇ ಸರ್ಕಾರದ ಮೇಲೆ ಒತ್ತಡ ತಂದಿರುವುದರ ಫಲವಾಗಿ ಪಾಲಿಕೆಯನ್ನು ಮೂರು ಭಾಗವಾಗಿ ವಿಭಜಿಸುವ ಪ್ರಯತ್ನ ನಡೆದಿದೆ. ಇವರ ತಂತ್ರಗಳಿಂದ ಪಾಲಿಕೆ ವಿಭಜನೆಯಾದರೆ, ನಗರದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಸುಗಮ ಆಡಳಿತದ ನೆಪಮಾಡಿಕೊಂಡು ಸುಗ್ರಿವಾಜ್ಞೆ ತರುವ ಮೂಲಕ ಪಾಲಿಕೆಯನ್ನು ವಿಭಜನೆ ಮಾಡಲು ಹೊರಟಿದೆ. ಈ ಆದೇಶಕ್ಕೆ ರಾಜ್ಯಪಾಲರು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಪಿ. ಆಂಜನಪ್ಪ, ಬಿ. ಸಣ್ಣೀರಪ್ಪ, ನಾಗೇಂದ್ರ ಬಾಬು, ಸತೀಶ್ ಗೌಡ, ಹೇಮಲತಾ, ಸತೀಶ್ ಭಾಗವಹಿಸಿದ್ದರು. ಮೆರವಣಿಗೆ ನಂತರ ನಿಯೋಗದಲ್ಲಿ ರಾಜಭವನಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT