ಶಿವರಾಜ್‍ಕುಮಾರ್ 
ಜಿಲ್ಲಾ ಸುದ್ದಿ

ಮೇಕೆದಾಟು ಹೋರಾಟಕ್ಕೆ ಬೆಂಬಲ: ಶಿವರಾಜ್‍ಕುಮಾರ್

ಮೇಕೆದಾಟು ಯೋಜನೆಗಾಗಿ ಹೋರಾಟ ಅಗತ್ಯವಿದ್ದು, ಇದಕ್ಕೆ ರಾಜ್ ಕುಟುಂಬದ ಬೆಂಬಲವಿದೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಹೋರಾಟ ಅಗತ್ಯವಿದ್ದು, ಇದಕ್ಕೆ ರಾಜ್ ಕುಟುಂಬದ ಬೆಂಬಲವಿದೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ.

ವರನಟ ಡಾ.ರಾಜ್‍ಕುಮಾರ್ ಅವರು 9ನೇ ಪುಣ್ಯ ತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸ್ಮಾರಕ ಸಮಾಧಿಗೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರಿಗೆ ಮಾತನಾಡಿದರು. `ಕುಡಿಯುವ ನೀರಿಗಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಬಗ್ಗೆ ಚಿಂತಿಸಿದೆ. ಆದರೆ, ಇದಕ್ಕೆ ತಮಿಳುನಾಡು ಆರಂಭದಲ್ಲೇ ವಿರೋಧಿಸುತ್ತಿರುವುದು ಸರಿಯಲ್ಲ.

ಈ ವಿಚಾರದಲ್ಲಿ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಕುಟುಂಬದ ಬೆಂಬಲವಿದೆ. ಏ.18ರಂದು ನಡೆಯುವ ಕರ್ನಾಟಕ ಬಂದ್‍ನಲ್ಲಿ ನಾನೂ ಭಾಗವಹಿಸುತ್ತೇನೆ' ಎಂದರು. ರಾಜ್ಯದ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ನಾವು ಮತ್ತು ನಮ್ಮ ಕುಟುಂಬ ಸದಾ ಹೋರಾಟಕ್ಕೆ ಇಳಿಯುತ್ತೇವೆ. ನಾಡಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗದಂತೆ ವಿರೋಧಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ