ವಿಜ್ಞಾನ ಸಾಹಿತಿ ಪ್ರೊ.ರಾಜಶೇಖರ ಭೂಸನೂರಮಠ ವಿಧಿವಶ 
ಜಿಲ್ಲಾ ಸುದ್ದಿ

ವಿಜ್ಞಾನ ಸಾಹಿತಿ ರಾಭೂ ಇನ್ನಿಲ್ಲ

ಕನ್ನಡದಲ್ಲಿ ವಿಜ್ಞಾನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ.ರಾಜಶೇಖರ ಭೂಸನೂರಮಠ (77) ಶನಿವಾರ ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು...

ಧಾರವಾಡ: ಕನ್ನಡದಲ್ಲಿ ವಿಜ್ಞಾನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ.ರಾಜಶೇಖರ ಭೂಸನೂರಮಠ (77) ಶನಿವಾರ ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

`ರಾಭೂ' ಎಂದೇ ಖ್ಯಾತರಾದ ಪ್ರೊ. ರಾಜಶೇಖರ ಭೂಸನೂರಮಠ ಅವರನ್ನು ಕನ್ನಡದಲ್ಲಿ ವೈಜ್ಞಾನಿಕ ಕಥಾಸಾಹಿತ್ಯದ ಅಧಿಕೃತ ಜನಕರು ಎಂದೇ ಗುರುತಿಸಲಾಗುತ್ತದೆ. ಪ್ರಸಿದ್ಧ ಸಂಶೋಧಕ ಪ್ರೊ. ಸಂ.ಶಿ.ಭೂಸನೂರಮಠ ಪುತ್ರ ರಾಭೂ ಅವರು, ಕಾದಂಬರಿಕಾರ, ಕತೆಗಾರ, ನಾಟಕಕಾರ, ಪ್ರಬಂಧಕಾರ, ವಿಮರ್ಶಕ, ಭಾಷಾಂತರಕಾರ ರಾಗಿಯೂ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರು. ಕನ್ನಡದಲ್ಲಿ 80 ಮತ್ತು ಇಂಗ್ಲಿಷಿನಲ್ಲಿ 20 ಪುಸ್ತಕಗಳು ಪ್ರಕಟವಾಗಿವೆ.

ಮಕ್ಕಳಿಗಾಗಿ ಕಥೆ, ಕಾದಂಬರಿ, ಕಾಮಿಕ್ಸ್ ಹೀಗೆ 15ಕ್ಕಿಂತ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಾಜ್ಯ ವಿಜ್ಞಾನ ಪರಿಷತ್ತಿನ ಸಂಸ್ಥಾಪಕ ಸದಸ್ಯರಾಗಿ ಆನಂತರ ರಾಜ್ಯ ಉಪಾಧ್ಯಕ್ಷರಾಗಿದ್ದ ಅವರು, ಅಮೆರಿಕನ್ ಬಯಾಗ್ರಾಫಿಕಲ್  ಇನ್‍ಸ್ಟಿಟ್ಯೂಟ್ ವತಿಯಿಂದ 1999ರಲ್ಲಿ ವರ್ಷದ ವ್ಯಕ್ತಿ, 2000ರಲ್ಲಿ ಯುನಿವರ್ಸಲ್ ಅವಾರ್ಡ್ ಆಫ್ ಅಕಂಪ್ಲಿಷಮೆಂಟ್ ಪ್ರಶಸ್ತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT