ವಿಜ್ಞಾನ ಸಾಹಿತಿ ಪ್ರೊ.ರಾಜಶೇಖರ ಭೂಸನೂರಮಠ ವಿಧಿವಶ 
ಜಿಲ್ಲಾ ಸುದ್ದಿ

ವಿಜ್ಞಾನ ಸಾಹಿತಿ ರಾಭೂ ಇನ್ನಿಲ್ಲ

ಕನ್ನಡದಲ್ಲಿ ವಿಜ್ಞಾನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ.ರಾಜಶೇಖರ ಭೂಸನೂರಮಠ (77) ಶನಿವಾರ ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು...

ಧಾರವಾಡ: ಕನ್ನಡದಲ್ಲಿ ವಿಜ್ಞಾನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ.ರಾಜಶೇಖರ ಭೂಸನೂರಮಠ (77) ಶನಿವಾರ ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

`ರಾಭೂ' ಎಂದೇ ಖ್ಯಾತರಾದ ಪ್ರೊ. ರಾಜಶೇಖರ ಭೂಸನೂರಮಠ ಅವರನ್ನು ಕನ್ನಡದಲ್ಲಿ ವೈಜ್ಞಾನಿಕ ಕಥಾಸಾಹಿತ್ಯದ ಅಧಿಕೃತ ಜನಕರು ಎಂದೇ ಗುರುತಿಸಲಾಗುತ್ತದೆ. ಪ್ರಸಿದ್ಧ ಸಂಶೋಧಕ ಪ್ರೊ. ಸಂ.ಶಿ.ಭೂಸನೂರಮಠ ಪುತ್ರ ರಾಭೂ ಅವರು, ಕಾದಂಬರಿಕಾರ, ಕತೆಗಾರ, ನಾಟಕಕಾರ, ಪ್ರಬಂಧಕಾರ, ವಿಮರ್ಶಕ, ಭಾಷಾಂತರಕಾರ ರಾಗಿಯೂ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರು. ಕನ್ನಡದಲ್ಲಿ 80 ಮತ್ತು ಇಂಗ್ಲಿಷಿನಲ್ಲಿ 20 ಪುಸ್ತಕಗಳು ಪ್ರಕಟವಾಗಿವೆ.

ಮಕ್ಕಳಿಗಾಗಿ ಕಥೆ, ಕಾದಂಬರಿ, ಕಾಮಿಕ್ಸ್ ಹೀಗೆ 15ಕ್ಕಿಂತ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಾಜ್ಯ ವಿಜ್ಞಾನ ಪರಿಷತ್ತಿನ ಸಂಸ್ಥಾಪಕ ಸದಸ್ಯರಾಗಿ ಆನಂತರ ರಾಜ್ಯ ಉಪಾಧ್ಯಕ್ಷರಾಗಿದ್ದ ಅವರು, ಅಮೆರಿಕನ್ ಬಯಾಗ್ರಾಫಿಕಲ್  ಇನ್‍ಸ್ಟಿಟ್ಯೂಟ್ ವತಿಯಿಂದ 1999ರಲ್ಲಿ ವರ್ಷದ ವ್ಯಕ್ತಿ, 2000ರಲ್ಲಿ ಯುನಿವರ್ಸಲ್ ಅವಾರ್ಡ್ ಆಫ್ ಅಕಂಪ್ಲಿಷಮೆಂಟ್ ಪ್ರಶಸ್ತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

BYSರನ್ನು ಸಿಎಂ ಕುರ್ಚಿಯಿಂದ ಇಳಿಸಿದವರೇ ಗೌರವ ಸಮಾರಂಭ ನಡೆಸುತ್ತಿದ್ದಾರೆ, ಇದು ಅಭಿಮಾನೋತ್ಸವವಲ್ಲ-ರಾಜಕೀಯ ಗಿಮಿಕ್; ಜಾರಕಿಹೊಳಿ

ಟಿವಿಕೆ ಉದಯಕ್ಕೆ ಕಾರಣ ದ್ರಾವಿಡ ಪಕ್ಷಗಳ ವೈಫಲ್ಯ ಕಾರಣ: ಬಿಜೆಪಿ ಸಂಸದ ಯದುವೀರ್

SCROLL FOR NEXT