ಕರವೇ ಪ್ರತಿಭಟನೆ 
ಜಿಲ್ಲಾ ಸುದ್ದಿ

ಕರವೇ ಕೆಂಡಾಮಂಡಲ

ಬಿಬಿಎಂಪಿ ಮೂರು ಭಾಗಗಳನ್ನಾಗಿ ವಿಂಗಡಿಸಿದಲ್ಲಿ ಕನ್ನಡಿಗರು ಪರಕೀಯರಾಗಬೇಕಾಗುತ್ತದೆ. ಬೆಳಗಾವಿಯಲ್ಲಿ ಕನ್ನಡಿಗರು ಅನುಭವಿಸುತ್ತಿರುವ...

ಬೆಂಗಳೂರು: ಬಿಬಿಎಂಪಿ ಮೂರು ಭಾಗಗಳನ್ನಾಗಿ ವಿಂಗಡಿಸಿದಲ್ಲಿ ಕನ್ನಡಿಗರು ಪರಕೀಯರಾಗಬೇಕಾಗುತ್ತದೆ. ಬೆಳಗಾವಿಯಲ್ಲಿ ಕನ್ನಡಿಗರು ಅನುಭವಿಸುತ್ತಿರುವ ಸ್ಥಿತಿಯನ್ನೇ ಬೆಂಗಳೂರಿಗರೂ ಅನುಭವಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಬಾರದು ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದರು.

ಬಿಬಿಎಂಪಿ ವಿಭಜನೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ನಾರಾಯಣಗೌಡ ಮಾತನಾಡಿ, ಸರ್ಕಾರ ಮೊಂಡುತನದಿಂದ ಅಖಂಡವಾಗಿರುವ ಬೆಂಗಳೂರನ್ನು ಒಡೆಯಲು ಯತ್ನಿಸುತ್ತಿದೆ. ಇದಕ್ಕೆ ಕನ್ನಡಿಗರು ಅವಕಾಶ ನೀಡಬಾರದು. ರಾಜಧಾನಿಯಲ್ಲಿ ಇರುವ ಪರಿಸ್ಥಿತಿ ನೋಡಿದರೆ ಮುಂದೆ ಸಾಮಾಜಿಕ ಅಸಮತೋಲನ ಉಂಟಾಗಿ ಕನ್ನಡಿಗರೇ ಪರಕೀಯರಾಗ ಬೇಕಾಗುತ್ತದೆ. ಬಿಬಿಎಂಪಿಯನ್ನು ವಿಭಜಿಸಿದರೆ ಮುಂದಾದರೆ ಅದು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದಂತೆ ಮತ್ತು ಒಡೆದು ಆಳುವ ನೀತಿ ಎಂದರು.

ಅನ್ಯಭಾಷಿಕರಿಗೆ ಮಣೆ

ಬೆಂಗಳೂರಿನಲ್ಲಿ ಬಹುತೇಕ ಅನ್ಯಭಾಷಿಗರು ನೆಲೆಸಿದ್ದಾರೆ. ಹಾಗಾಗಿ ಬಿಬಿಎಂಪಿ ಭಾಗವಾದರೆ ಕನ್ನಡಿಗರು ಮೇಯರ್ ಆಗಲು ಸಾಧ್ಯವಿಲ್ಲ. ಈಗಾಗಲೇ ಬೆಳಗಾವಿಯಲ್ಲಿ ಎಂಇಎಸ್  ಕಾರ್ಯಕರ್ತರ ಜತೆ ಗುದ್ದಾಟ ನಡೆಸುತ್ತಿರುವಂತೆ ಇಲ್ಲಿಯೂ ಅನ್ಯಭಾಷಿಗರ ಜತೆ ಸಂಘರ್ಷ ನಡೆಸಬೇಕಾಗುತ್ತದೆ. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಸದ್ಯಕ್ಕೆ ತಾವು ಪ್ರತಿಭಟನೆ ಕೈಬಿಡುವುದಿಲ್ಲ. ಪ್ರತಿನಿತ್ಯ ವಿನೂತನ ರೀತಿಯಲ್ಲಿ ಪ್ರತಿಭಟಿಸುತ್ತೇವೆ. ಮಂಗಳವಾರ ಹಾಗೂ ಬುಧವಾರ ಕ್ರಮವಾಗಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಸಿಎಂ ಪ್ರತಿಕೃತಿ ದಹನ ಹಾಗೂ ಯಾವುದೇ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಜರಾದಲ್ಲಿ ಕಪ್ಪುಬಟ್ಟೆ ಕಟ್ಟಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.

ಬಂಧನ, ಬಿಡುಗಡೆ
ಬಿಬಿಎಂಪಿ ವಿಭಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಕೆಲವು ಕಾಲ ಪೊಲೀಸ್ ಹಾಗೂ ಪ್ರತಿಭಟನಾಕಾರರ ಜತೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸುಮಾರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ, ಬಿಡುಗಡೆ ಮಾಡಿದರು. ಗಾಂಧಿನಗರದಿಂದ ರೇಸ್‍ಕೋರ್ಸ್ ರಸ್ತೆ ಮಾರ್ಗವಾಗಿ ಮಹಿಳಾ ಕಾರ್ಯಕರ್ತೆಯರು ಸೇರಿದಂತೆ ನೂರಾರು ಮಂದಿ ಕರವೇ ಕಾರ್ಯಕರ್ತರು ಸರ್ಕಾರದ ಕ್ರಮ ಖಂಡಿಸಿ, ಸರ್ಕಾರದ ವಿರುದ್ಧ ಧಿಕ್ಕಾರದ  ಷಣೆ ಕೂಗಿ, ರ್ಯಾಲಿ ನಡೆಸಿದರು. ಈ ವೇಳೆ ಕೆಲಕಾಲ ತಳ್ಳಾಟ-ನೂಕಾಟ ನಡೆದು, ನಂತರ ನೂರಾರು ಮಂದಿಯನ್ನು ಬಂಧಿಸಿ ಕರೆದೊಯ್ಯಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT