ವೇಣುಗೋಪಾಲ್-ಶೋಭಾ 
ಜಿಲ್ಲಾ ಸುದ್ದಿ

ವರದಕ್ಷಿಣೆ ಕಿರುಕುಳ: ಡಿಸ್ಚಾರ್ಜ್ ಆದ ತಕ್ಷಣ ವೇಣುಗೋಪಾಲ್ ಆರೆಸ್ಟ್

ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್‍ನನ್ನು ಆಸ್ಪತ್ರೆಯಿಂದ....

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್‍ನನ್ನು ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪತ್ನಿ ಮಂಡ್ಯ ಮೂಲದ ಶೋಭಾಳಿಗೆ ತೀವ್ರ ಚಿತ್ರಹಿಂಸೆ ನೀಡಿದ್ದ ವೇಣುಗೋಪಾಲ್, ಸಂಬಂಧಿಕರಿಂದ ಒದೆ ತಿಂದ ಹಿನ್ನೆಲೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಿರುಕುಳಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದ ಶೋಭಾಳನ್ನು ಆಕೆಯ ಪೋಷಕರು ನಗರದ ಖಾಸಗಿ ಆಸ್ಪತ್ರೆಗ ಸೇರಿಸಿದ್ದ ಬೆನ್ನಲೇ ವೇಣು ಗೋಪಾಲ್ ಕೂಡ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿರಲಿಲ್ಲ.

ಸೋಮವಾರ ಕೂಡ ಆತ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ. ಇಂದು ಬೆಳಗ್ಗೆ ವೇಣುಗೋಪಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿಜಯನಗರ ಪೊಲೀಸರು ಆತನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT