ವಜುಭಾಯಿ ರೂಢಾಬಾಯಿ ವಾಲಾ 
ಜಿಲ್ಲಾ ಸುದ್ದಿ

ಒಳ್ಳೆಯವರಾಗಿರುವುದರಿಂದಲೇ ಒಳ್ಳೆಯ ದಿನಗಳು: ರಾಜ್ಯಪಾಲ

ಜೀವನದಲ್ಲಿ ಒಳ್ಳೆಯ ದಿನಗಳ ಬಗ್ಗೆ ಕನಸು ಕಾಣುವುದಕ್ಕಿಂತ ಮೊದಲು ನಾವು ಒಳ್ಳೆಯವರಾಗುವ ಬಗ್ಗೆ ಪ್ರಯತ್ನಿಸಬೇಕು...

ಬೆಂಗಳೂರು: ಜೀವನದಲ್ಲಿ ಒಳ್ಳೆಯ ದಿನಗಳ ಬಗ್ಗೆ ಕನಸು ಕಾಣುವುದಕ್ಕಿಂತ ಮೊದಲು ನಾವು ಒಳ್ಳೆಯವರಾಗುವ ಬಗ್ಗೆ ಪ್ರಯತ್ನಿಸಬೇಕು. ಆಗ ಆಗುವುದೆಲ್ಲಾ ಒಳ್ಳೆಯದೇ ಆಗುತ್ತದೆ ಎಂದು
ರಾಜ್ಯಪಾಲ ವಜುಭಾಯಿ ರೂಡಾಭಾಯಿ ವಾಲಾ ಹೇಳಿದ್ದಾರೆ.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕವು ವಿದ್ಯಾರ್ಥಿಗಳಿಗೆ ರಾಜಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ದೇಶಕ್ಕಾಗಿ ಬದು
ಕುವವ, ಮಡಿಯುವವ ಮಾತ್ರ ನಿಜವಾದ ಪ್ರಜೆ. ರಾಷ್ಟ್ರಪ್ರೇಮ ಪ್ರತಿಯೊಬ್ಬರಲ್ಲೂ ಇರಬೇಕು. ಮಾತೃಭೂಮಿಗಾಗಿ ಜೀವನವನ್ನು ಮುಡಿಪಾಗಿಡಬೇಕು' ಎಂದು ಹೇಳಿದರು. ಸ್ಕೌಟ್ಸ್ ಮತ್ತು

ಗೈಡ್ಸ್‍ನಲ್ಲಿ ಮಕ್ಕಳಿಗೆ ಸಂಸ್ಕೃತಿ ಸಿಗುತ್ತದೆ. ಪೋಷಕರ ಸಂಸ್ಕೃತಿ ಉತ್ತಮವಾಗಿದ್ದರೆ ಮಕ್ಕಳೂ ಸುಸಂಸ್ಕೃತರಾಗಿರುತ್ತಾರೆ. ಮಕ್ಕಳು ಶೈಕ್ಷಣಿಕವಾಗಿ ಎಷ್ಟು ಅಂಕ ಗಳಿಸಿದ್ದಾರೆ ಎಂಬುದು ಮುಖ್ಯವಲ್ಲ. ಜೀವನದಲ್ಲಿ ಎಷ್ಟು ಧೈರ್ಯವಂತರಾಗಿದ್ದಾರೆ ಎಂಬುದಷ್ಟೇ ಗಣನೆಗೆ ಬರುತ್ತದೆ. ಇಲ್ಲಿ ಧೈರ್ಯ, ಶಕ್ತಿ ಇದ್ದ ವನಿಗೆ ಮಾತ್ರ ಮರ್ಯಾದೆ ಸಿಗಲಿದೆ. ಜನತೆ ನಮ್ಮನ್ನು ಗುರುತಿಸುವಂತೆ ಬಾಳಬೇಕು. ಎಷ್ಟು ಶ್ರೀಮಂತರಾಗಿ ಬದುಕಿದ್ದೀರಿ ಎಂಬುದಕ್ಕಿಂತ, ಹೇಗೆ ಬದುಕಿದ್ದೀರಿ? ಎಂಬುದೇ ಮುಖ್ಯ ಎಂದು ಹೇಳಿದರು. ಮಕ್ಕಳು ಟಿವಿ, ಸಿನಿಮಾ ನೋಡುವುದನ್ನು ಬಿಡಬೇಕು.

ಓದಿನತ್ತ ಹೆಚ್ಚು ಶ್ರದ್ಧೆ ಇಡಬೇಕು. ಆಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಇಂಥ ನಿರ್ಣಯ ಕೈಗೊಳ್ಳಲು ಸರಳ ಜೀವನದ ಅವಶ್ಯವಿದೆ ಎಂದು ಹೇಳಿದರು. ಮಾಜಿ ಸಚಿವ, ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಸಾರ್ವಜನಿಕ ಶಿಕ್ಷಣ ಆಯುಕ್ತ ಮಹಮ್ಮದ್ ಮೌಸಿನ್, ಗೈಡ್ಸ್‍ನ ರಾಜ್ಯ ಆಯುಕ್ತೆ ಗೀತಾ ನಟರಾಜ್ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT