ಕಾಂಗ್ರೆಸ್‍ಗೆ ಅನುಕೂಲಕರ ಮೀಸಲು ಪಟ್ಟಿ 
ಜಿಲ್ಲಾ ಸುದ್ದಿ

ಕಾಂಗ್ರೆಸ್‍ಗೆ ಅನುಕೂಲಕರ ಮೀಸಲು ಪಟ್ಟಿ: ಎಚ್.ಡಿ.ದೇವೇಗೌಡ

ಬಿಬಿಎಂಪಿ ತ್ರಿಭಜನೆಯಿಂದ ಮೂವರು ಮೇಯರ್, ಕಚೇರಿಗಳು ಎಲ್ಲ ವಿಭಾಗವಾಗಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ...

ಹಾಸನ: ಬಿಬಿಎಂಪಿ ತ್ರಿಭಜನೆಯಿಂದ ಮೂವರು ಮೇಯರ್, ಕಚೇರಿಗಳು ಎಲ್ಲ ವಿಭಾಗವಾಗಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ. ವಿಭಾಗೀಯ ಪೀಠಕ್ಕೂ ಸರ್ಕಾರದ ವಾದ ಕೇಳಲಿಕ್ಕೆ ಇಷ್ಟ ಇಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿಭಜನೆಯ ನೆಪವನ್ನು ಹೂಡುವುದು ಸರಿಯಲ್ಲ ಎಂದು ಹೇಳಿದರು. ಬಿಬಿಎಂಪಿಯಲ್ಲಿ 14 ಮಂದಿ ಒಕ್ಕಲಿ ಸದಸ್ಯರಿದ್ದಾರೆ. ಆ ಕ್ಷೇತ್ರಗಳಿಗೆ ಸರ್ಕಾರ ತಮಗೆ ಬೇಕಾದ ಸಮಾಜದವರಿಗೆ ಮೀಸಲು ನೀಡಿದ್ದಾರೆ. ಮೀಸಲು ಬದಲಿಸಿ ಒಬ್ಬರೂ ಗೆಲ್ಲದಂತೆ ಮಾಡಿದ್ದಾರೆ.

ಚುನಾವಣಾ ಆಯೋಗ ಎಲ್ಲ ಪ್ರಕ್ರಿಯೆಯನ್ನು ನಡೆಸಿದ ಮೇಲೆ ಈಗ ವಿಭಜನೆಯ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಆಯೋಗ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಈ ವಿಚಾರ ಕೋರ್ಟ್ ನಲ್ಲಿ ಇದೆ. ಅಲ್ಲದೆ ರಾಜ್ಯಪಾಲರು ಇದನ್ನು ಹೇಗೆ ನಿಭಾಯಿಸುತ್ತಾರೆ ಅನ್ನೋದನ್ನು ನೋಡಿಬೇಕಿದೆ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT