ಕೆಪಿಎಸ್ ಸಿ: ರಾಷ್ಟ್ರಪತಿಗೆ ಮನವಿ 
ಜಿಲ್ಲಾ ಸುದ್ದಿ

ಕೆಪಿಎಸ್ ಸಿ: ರಾಷ್ಟ್ರಪತಿಗೆ ಮನವಿ

ಕೆಎಎಸ್ 2011ನೇ ಸಾಲಿನ ಪರೀ ಕ್ಷೆಯ ಅಕ್ರಮದಲ್ಲಿ ಭಾಗಿಯಾಗಿರುವ ಕೆಪಿಎಸ್‍ಸಿಯ 8 ಸದಸ್ಯರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ರಾಷ್ಟ್ರಪತಿಯವರಿಗೆ ಮನವಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ...

ಬೆಂಗಳೂರು: ಕೆಎಎಸ್ 2011ನೇ ಸಾಲಿನ ಪರೀ ಕ್ಷೆಯ ಅಕ್ರಮದಲ್ಲಿ ಭಾಗಿಯಾಗಿರುವ ಕೆಪಿಎಸ್‍ಸಿಯ 8 ಸದಸ್ಯರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ರಾಷ್ಟ್ರಪತಿಯವರಿಗೆ ಮನವಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಅಕ್ರಮಗಳಲ್ಲಿ ಭಾಗಿಯಾಗಿರುವ 3 ನಿವೃತ್ತ ಹಾಗೂ 5 ಹಾಲಿ ಕೆಪಿಎಸ್‍ಸಿ ಸದಸ್ಯರ ಮೇಲೆ ಕ್ರಮ ಕೈಗೊಳ್ಳಲು ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನೇಮಕ ಅವ್ಯವಹಾರ ಸ್ಪಷ್ಟವಾಗಿದ್ದರೂ, ಸರ್ಕಾರ ಇದುವರೆಗೂ ಅಧಿಕಾರಿಗಳ ಮೇಲೆ ತನಿಖೆಗೆ ಮುಂದಾಗಿರಲಿಲ್ಲ. ಇದೀಗ ಅಧಿಕಾರಿಗಳ ಮೇಲೆ ತನಿಖೆ ನಡೆಸಿ ಸತ್ಯಾಂಶ ಬಹಿರಂಗಕ್ಕೆ ಸಂಪುಟ ನಿರ್ಧರಿಸಿದೆ.

ಯಾರ್ ಯಾರ ಮೇಲೆ ಕ್ರಮ? ನಿವೃತ್ತ ಸದಸ್ಯರಾದ ಡಾ.ಬಿ.ಎಸ್ ಕೃಷ್ಣಪ್ರಸಾದ್, ಕನ್ನಿ ರಾಮ್, ಎಲ್.ಎನ್.ರಾಮಕೃಷ್ಣ, ಹಾಲಿ ಸದಸ್ಯ ರಾದ ಎಸ್.ಆರ್.ರಂಗಮೂರ್ತಿ, ಡಾ.ಎನ್.ಮಹದೇವ್, ಡಾ.ಎಚ್.ವಿ.ಪಾಶ್ರ್ವನಾಥ್, ದಯಾಶಂಕರ್, ಡಾ.ಎಚ್.ಡಿ. ಪಾಟೀಲ್ ಅವರನ್ನು ವಿಚಾರಣೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುತ್ತದೆ. ಜೊತೆಗೆ ಸದಸ್ಯೆ ಮಂಗಳಾ ಶ್ರೀಧರ್ ಹಾಗೂ ಅಂದಿನ ಕೆಪಿಎಸ್‍ಸಿಯ ಕಾರ್ಯದರ್ಶಿಗಳನ್ನು ವಿಚಾರಣೆಗೊಳಪಡಿಸಲು ಕೋರಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT