ಟಿ.ಎಂ. ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಬಿಬಿಎಂಪಿ ಆದಾಯ ಹೆಚ್ಚಳಕ್ಕೆ ಆದ್ಯತೆ: ವಿಜಯಭಾಸ್ಕರ್

ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ...

ಬೆಂಗಳೂರು: ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಟಿ.ಎಂ.ವಿಜಯಭಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಆಯುಕ್ತ ಎಂ.ಲಕ್ಷ್ಮಿನಾರಾಯಣ ಅವರು ವಿಜಯಭಾಸ್ಕರ್ ಅವರನ್ನು ಬಿಬಿಎಂಪಿಗೆ ಸ್ವಾಗತಿಸಿದರು. ಸರ್ಕಾರ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವುದು ಸಂತಸ ತಂದಿದೆ. ಇದು ಹೆಮ್ಮೆಯ ವಿಚಾರವಾಗಿದ್ದು, ಸರ್ಕಾರದ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತೇನೆ. ಜನರು ಬಿಬಿಎಂಪಿಯಲ್ಲಿ ಬದಲಾವಣೆ ಬಯಸಿದ್ದು, ಹೆಚ್ಚಿನ ಆದಾಯ ತರುವ ವ್ಯವಸ್ಥೆ ಸುಧಾರಣೆ ಮಾಡಬಹುದು. ಹೆಚ್ಚಿನ ಆದಾಯ ತರುವುದು ಹಾಗೂ ವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬದಲಾವಣೆ ತರಬಹುದು. ಬಿಬಿಎಂಪಿಯಲ್ಲಿನ ಜನರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾದ ವ್ಯವಸ್ಥೆಯಿದೆ. ಸಾರ್ವಜನಿಕರು ನೇರವಾಗಿ ಭೇಟಿಯಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಲು ಶೀಘ್ರದಲ್ಲಿ ಅವಕಾಶ ನೀಡಲಿದ್ದೇನೆ ಎಂದು ತಿಳಿಸಿದರು.

ವರ್ಗಾವಣೆಯಾದವರು ಯಾರ್ಯಾರು?
ಬೆಂಗಳೂರು:
ಬಿಬಿಎಂಪಿ ವಿಸರ್ಜನೆಯಿಂದ ಆಡಳಿತಾ„ಕಾರಿಯಾಗಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಆಯುಕ್ತರಾಗಿ ಜಿ. ಕುಮಾರನಾಯಕ್ ಅವರನ್ನು ಸರ್ಕಾರ ನೇಮಿಸಿದ್ದು, ಇವರೊಂದಿಗೆ ನಾಲ್ಕೈದು ಐಎಎಸ್ ಅಧಿಕಾರಿಗಳ ವಗಾರ್ವಣೆಯಾಗಿದೆ.
-ಟಿ.ಎಂ. ವಿಜಯಭಾಸ್ಕರ್- ಆಡಳಿತಾಧಿಕಾರಿ, ಬಿಬಿಎಂಪಿ.
- ಜಿ. ಕುಮಾರ್ ನಾಯಕ್- ಆಯುಕ್ತ, ಬಿಬಿಎಂಪಿ.
-ಪಂಕಜ್‍ಕುಮಾರ್ ಪಾಂಡೆ- ವ್ಯವಸ್ಥಾಪಕ ನಿರ್ದೇಶಕ, ಕೆಪಿಟಿಸಿಎಲ್.
-ಅಭಿರಾಮ್ ಜಿ. ಶಂಕರ್- ಉಪ ಕಾರ್ಯದರ್ಶಿ, (ಡಿಪಿಎಆರ್ ಸೇವೆಗಳು-2)
-ನಂಜುಂಡೇಗೌಡ (ಕೆಎಎಸ್)- ಕೊಡಗು ಜಿಲ್ಲೆ ಮಡಿಕೇರಿ ಉಪವಿಭಾಗಾ„ಕಾರಿ.

ನಾಳೆ ವಿಧೇಯಕ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಏ.20 ಸೋಮವಾರ ಬೆಳಗ್ಗೆ 11 ಗಂಟೆಗೆ 2015 ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು  ಮಂಡಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಓಂ. ಪ್ರಕಾಶ್ ತಿಳಿಸಿದ್ದಾರೆ. ಅದೇ ದಿನ ಮಧ್ಯಾಹ್ನ 2 ಗಂಟೆಗೆ ವಿಧಾನ ಪರಿಷತ್ ಸಮಾವೇಶಗೊಳ್ಳಲಿದೆ ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT