ಟಿ.ಎಂ. ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಬಿಬಿಎಂಪಿ ಆದಾಯ ಹೆಚ್ಚಳಕ್ಕೆ ಆದ್ಯತೆ: ವಿಜಯಭಾಸ್ಕರ್

ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ...

ಬೆಂಗಳೂರು: ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಟಿ.ಎಂ.ವಿಜಯಭಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಆಯುಕ್ತ ಎಂ.ಲಕ್ಷ್ಮಿನಾರಾಯಣ ಅವರು ವಿಜಯಭಾಸ್ಕರ್ ಅವರನ್ನು ಬಿಬಿಎಂಪಿಗೆ ಸ್ವಾಗತಿಸಿದರು. ಸರ್ಕಾರ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವುದು ಸಂತಸ ತಂದಿದೆ. ಇದು ಹೆಮ್ಮೆಯ ವಿಚಾರವಾಗಿದ್ದು, ಸರ್ಕಾರದ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತೇನೆ. ಜನರು ಬಿಬಿಎಂಪಿಯಲ್ಲಿ ಬದಲಾವಣೆ ಬಯಸಿದ್ದು, ಹೆಚ್ಚಿನ ಆದಾಯ ತರುವ ವ್ಯವಸ್ಥೆ ಸುಧಾರಣೆ ಮಾಡಬಹುದು. ಹೆಚ್ಚಿನ ಆದಾಯ ತರುವುದು ಹಾಗೂ ವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬದಲಾವಣೆ ತರಬಹುದು. ಬಿಬಿಎಂಪಿಯಲ್ಲಿನ ಜನರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾದ ವ್ಯವಸ್ಥೆಯಿದೆ. ಸಾರ್ವಜನಿಕರು ನೇರವಾಗಿ ಭೇಟಿಯಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಲು ಶೀಘ್ರದಲ್ಲಿ ಅವಕಾಶ ನೀಡಲಿದ್ದೇನೆ ಎಂದು ತಿಳಿಸಿದರು.

ವರ್ಗಾವಣೆಯಾದವರು ಯಾರ್ಯಾರು?
ಬೆಂಗಳೂರು:
ಬಿಬಿಎಂಪಿ ವಿಸರ್ಜನೆಯಿಂದ ಆಡಳಿತಾ„ಕಾರಿಯಾಗಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಆಯುಕ್ತರಾಗಿ ಜಿ. ಕುಮಾರನಾಯಕ್ ಅವರನ್ನು ಸರ್ಕಾರ ನೇಮಿಸಿದ್ದು, ಇವರೊಂದಿಗೆ ನಾಲ್ಕೈದು ಐಎಎಸ್ ಅಧಿಕಾರಿಗಳ ವಗಾರ್ವಣೆಯಾಗಿದೆ.
-ಟಿ.ಎಂ. ವಿಜಯಭಾಸ್ಕರ್- ಆಡಳಿತಾಧಿಕಾರಿ, ಬಿಬಿಎಂಪಿ.
- ಜಿ. ಕುಮಾರ್ ನಾಯಕ್- ಆಯುಕ್ತ, ಬಿಬಿಎಂಪಿ.
-ಪಂಕಜ್‍ಕುಮಾರ್ ಪಾಂಡೆ- ವ್ಯವಸ್ಥಾಪಕ ನಿರ್ದೇಶಕ, ಕೆಪಿಟಿಸಿಎಲ್.
-ಅಭಿರಾಮ್ ಜಿ. ಶಂಕರ್- ಉಪ ಕಾರ್ಯದರ್ಶಿ, (ಡಿಪಿಎಆರ್ ಸೇವೆಗಳು-2)
-ನಂಜುಂಡೇಗೌಡ (ಕೆಎಎಸ್)- ಕೊಡಗು ಜಿಲ್ಲೆ ಮಡಿಕೇರಿ ಉಪವಿಭಾಗಾ„ಕಾರಿ.

ನಾಳೆ ವಿಧೇಯಕ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಏ.20 ಸೋಮವಾರ ಬೆಳಗ್ಗೆ 11 ಗಂಟೆಗೆ 2015 ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು  ಮಂಡಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಓಂ. ಪ್ರಕಾಶ್ ತಿಳಿಸಿದ್ದಾರೆ. ಅದೇ ದಿನ ಮಧ್ಯಾಹ್ನ 2 ಗಂಟೆಗೆ ವಿಧಾನ ಪರಿಷತ್ ಸಮಾವೇಶಗೊಳ್ಳಲಿದೆ ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT