ಟೋಲ್ ಗಲಾಟೆಗೆ ಗ್ರಾಪಂ ಸದಸ್ಯನೇ ಕಾರಣ; ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ ಮಾಡಿದ ಸಂಸ್ಥೆ 
ಜಿಲ್ಲಾ ಸುದ್ದಿ

ಟೋಲ್ ಗಲಾಟೆಗೆ ಗ್ರಾಪಂ ಸದಸ್ಯನೇ ಕಾರಣ; ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ ಮಾಡಿದ ಸಂಸ್ಥೆ

ಹೊಸಕೋಟೆ ಸಮೀಪ ಭಾನುವಾರ ಟೋಲ್ ಗೇಟ್ ನಲ್ಲಿ ನಡದೆ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಟೋಲ್ ಸಿಬ್ಬಂದಿ ಪಾಸ್ ತೋರಿಸಿ ಎಂದು ಕೇಳಿದಕ್ಕೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ ಅವರೇ ಮೊದಲು ಜಗಳ ಮಾಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ...

ಬೆಂಗಳೂರು: ಹೊಸಕೋಟೆ ಸಮೀಪ ಭಾನುವಾರ ಟೋಲ್ ಗೇಟ್ ನಲ್ಲಿ  ನಡದೆ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಟೋಲ್ ಸಿಬ್ಬಂದಿ ಪಾಸ್ ತೋರಿಸಿ ಎಂದು ಕೇಳಿದಕ್ಕೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ ಅವರೇ ಮೊದಲು ಜಗಳ ಮಾಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಟೋಲ್ ನಿರ್ವಹಿಸುತ್ತಿರುವ ಲ್ಯಾನ್ಕೊ ಸಂಸ್ಥೆ ವ್ಯವಸ್ಥಾಪಕ ಶ್ರೀಧರ್, ನಿನ್ನೆ ನಡೆದ ಜಗಳಕ್ಕೆ ಸ್ಥಳೀಯರೇ ಕಾರಣ. ಟೋಲ್ ಸಿಬ್ಬಂದಿ ಅಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಘಟನೆ ನಾರಾಯಣಸ್ವಾಮಿ ಅವರಿಂದಲೇ ಪ್ರಾರಂಭವಾಗಿದೆ ಎನ್ನಲು ಸಿಸಿ ಕ್ಯಾಮೆರಾ ದೃಶ್ಯ ಬಿಡುಗಡೆ ಮಾಡಿದ್ದಾರೆ. ಟೋಲ್ ಗೇಟ್‍ನಲ್ಲಿ ಆರೇಳು ಕಡೆ ಅಳವಡಿಸಿರುವ ಸಿಸಿ ಕ್ಯಾಮೆರಾಗಳಲ್ಲಿ ನಾರಾಯಣಸ್ವಾಮಿ ಅವರು ಮೊದಲು ಜಗಳ ಆರಂಭಿಸುತ್ತಾರೆ. ಬಳಿಕ ಅವರ ಮಗನನ್ನು ಕರೆಸಿಕೊಂಡು ಗಲಾಟೆ ನಡೆಸುತ್ತಿದ್ದಾರೆ.

ಮಾರಕ ಆಯುಧದಿಂದ ಸಿಸಿ ಕ್ಯಾಮೆರಾವನ್ನು ಧ್ವಂಸಗೊಳಿಸುತ್ತಿರುವುದು, ಟೋಲ್ ಬೂತ್‍ನಲ್ಲಿದ್ದ ಹಣವನ್ನು ಕದಿಯುತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಅವರ ವಿರುದ್ಧ ದೂರು ನೀಡಿರುವುದಾಗಿ ಲ್ಯಾನ್ಕೊ ಸಂಸ್ಥೆ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.

ಪಾಸ್ ತೋರಿಸಿದ್ದರೆ ಗಲಾಟೆ ಆಗುತ್ತಿರಲಿಲ್ಲ:
ಪ್ರತಿ ನಿತ್ಯ ನಾನಾ ಪಾಳಿಗಳಲ್ಲಿ ಬೇರೆ ಬೇರೆಯವರು ಕೆಲಸ ಮಾಡುತ್ತಿರುತ್ತಾರೆ. ಹೀಗಾಗಿ, ರಸ್ತೆಯಲ್ಲಿ ಓಡಾಡುವ ಪ್ರತಿಯೊಬ್ಬರ ಪರಿಚಯ ಇರುವುದಿಲ್ಲ. ಗ್ರಾಪಂ ಸದಸ್ಯ ನಾರಾಯಣಸ್ವಾಮಿ ಬಂದಾಗ ಸಿಬ್ಬಂದಿ ಪಾಸ್ ಕೇಳಿದ್ದಾರೆ. ಪಾಸ್ ತೋರಿಸಬಹುದಿತ್ತು. ಅದರ ಬದಲು ಅನಗತ್ಯ ಜಗಳ ತೆಗೆದಿದ್ದಾರೆ. ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಂಜುನಾಥ, ಗಲಾಟೆ ಮಾಡಿ ಕೈಯಿಂದ ಜೋರಾಗಿ ಟೋಲ್‍ಬೂತ್ ಗಾಜಿಗೆ ಹೊಡೆದಿದ್ದಾರೆ. ಇದರಿಂದಾಗಿ ಗಾಜು ಅವರ ಕೈಗೆ ಚುಚ್ಚಿತ್ತು. ಹೀಗೆ, ಇಡೀ ಘಟನೆಗೆ ಟೋಲ್ ಸಿಬ್ಬಂದಿ ಕಾರಣರಲ್ಲ ಎಂದು ಲ್ಯಾನ್ಕೊ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT