ವಾಟಾಳ್ ನಾಗರಾಜ್ 
ಜಿಲ್ಲಾ ಸುದ್ದಿ

ವಾಟಾಳ್‍ಗೆ ಅಕ್ರಮ ಬಂಧನ

ವಿಧಾನಸೌಧ ಆವರಣದಲ್ಲಿರುವ ಬ್ಯಾಂಕ್‍ಗೆ ತೆರಳಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಿಧಾನಸೌಧ ಪೊಲೀಸರು ಸೋಮವಾರ ಅಕ್ರಮವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ...

ಬೆಂಗಳೂರು: ವಿಧಾನಸೌಧ ಆವರಣದಲ್ಲಿರುವ ಬ್ಯಾಂಕ್‍ಗೆ ತೆರಳಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಿಧಾನಸೌಧ ಪೊಲೀಸರು ಸೋಮವಾರ ಅಕ್ರಮವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ವಾಟಾಳ್ ನಾಗರಾಜ್ ಅವರು, ಎಂದಿನಂತೆ ವಿಧಾನಸೌಧಕ್ಕೆ ಕಾರಿನಲ್ಲಿ ಆಗಮಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ತೆರಳುತ್ತಿದ್ದರು. ಆದರೆ, ದೇವರಾಜ ಅರಸು ಪ್ರತಿಮೆ ಬಳಿ ಇರುವ ದ್ವಾರದ ಬಳಿಯೇ ಕಾರು ತಡೆದ ಸುಮಾರು 30ರಷ್ಟಿದ್ದ ಪೊಲೀಸರು ಒಳಗೆ ಬಿಡಲು ನಿರಾಕರಿಸಿದರು. ತಾನು ಯಾವುದೇ ಚಳವಳಿ ಮಾಡಲು ಬಂದಿಲ್ಲ. ಮುಚ್ಚು ಮರೆ ಮಾಡಿ ಚಳವಳಿ ಮಾಡುವ ವ್ಯಕ್ತಿ ನಾನಲ್ಲ. ಬ್ಯಾಂಕಿನಲ್ಲಿ ಕೆಲಸವಿದ್ದು ಅಲ್ಲಿಗೆ ಹೋಗುತ್ತಿದ್ದೇನೆ ಎಂದು ತಿಳಿ ಹೇಳಿದರೂ, ಪೊಲೀಸರು ನನ್ನನ್ನು ಬಿಡದೆ
ಅನಾಗರಿಕವಾಗಿ ವರ್ತಿಸಿದರು ಎಂದು ವಾಟಾಳ್ ನಾಗರಾಜ್ ಹೇಳಿದರು.

ಬ್ಯಾಂಕಿಗೆ ಹೋಗುತ್ತಿದ್ದೇನೆ. ಬೇಕಿದ್ದರೆ ನನ್ನೊಂದಿಗೆ ನಾಲ್ವರು ಪೊಲೀಸರನ್ನು ಬೇಕಿದ್ದರೆ ಕಳುಹಿಸಿ ಎಂದೇ. ಆದರೆ, ಅದಕ್ಕೂ ಒಪ್ಪಲಿಲ್ಲ. ಅಂತಿಮವಾಗಿ ನನ್ನ ಚಾಲಕನನ್ನು ಬ್ಯಾಂಕಿಗೆ ಕಳುಹಿಸುತ್ತೇನೆ, ಆತನನ್ನು ಬಿಡಿ ಎಂದು ಹೇಳಿದೆ. ಅದಕ್ಕೊಪ್ಪಿದ ಅವರು, ಆತನ ಹಿಂದೆ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿದರು. ಹೀಗೆ, ನನ್ನನ್ನು ದರೋಡೆಕೋರನಂತೆ ಪೊಲೀಸರು ನೋಡಿದ್ದಾರೆ.

ಅಂತಿಮವಾಗಿ ಕಾರಣವಿಲ್ಲದೇ ನನ್ನನ್ನು ಬಂಧಿಸಿ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೂ ಅಕ್ರಮ ಬಂಧಿಸಿ ಠಾಣೆಯಲ್ಲಿರಿಸಿದ್ದರು. ಬಂಧನಕ್ಕೆ ಯಾವುದೇ ಕಾರಣ ತಿಳಿಸಿಲ್ಲ. ಕುಡಿಯಲು ನೀರು ಕೊಡದೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ನನಗೆ ಬಿಡುಗಡೆ ಮಾಡಿದ್ದಾರೆ.

ಕಾರಣ ನೀಡದೆ ಅಕ್ರಮವಾಗಿ ಬಂಧಿಸಿರುವುದು ಖಂಡನೀಯ. ಮಾಜಿ ಶಾಸಕ, ಹೋರಾಟಗಾರನಿಗೆ ಇಂತಹ ಗತಿಯಾದರೆ ರಾಜ್ಯದ ಸಾಮಾನ್ಯ ನಾಗರಿಕರ ಕತೆಯೇನು? ಪೊಲೀಸರ ಈ ದೌರ್ಜನ್ಯದ ವಿರುದ್ಧ ಮಂಗಳವಾರ ಗೃಹ ಸಚಿವ ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

SCROLL FOR NEXT