ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
ಜಿಲ್ಲಾ ಸುದ್ದಿ

ಸಾರಕ್ಕಿ ಕೆರೆ ಒತ್ತುವರಿ ತೆರವು ಮುಂದುವರಿಕೆ

ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ಅಂತಿಮ ಹಂತಕ್ಕೆ ತಲುಪಿದ್ದು, ಶೇ.10 ರಷ್ಟು ಕಾರ್ಯಾಚರಣೆ ಮಾತ್ರ ಬಾಕಿ ಉಳಿದಿದೆ...

ಬೆಂಗಳೂರು: ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ಅಂತಿಮ ಹಂತಕ್ಕೆ ತಲುಪಿದ್ದು, ಶೇ.10 ರಷ್ಟು ಕಾರ್ಯಾಚರಣೆ  ಮಾತ್ರ ಬಾಕಿ ಉಳಿದಿದೆ.

ಕಾರ್ಯಾಚರಣೆ ನಡುವೆ ಕೆಲವು ಕಟ್ಟಡಗಳ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ  ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ. ಬೃಹತ್ ಕಟ್ಟಡಗಳನ್ನು ಈಗಾಗಲೇ ಒಡೆದಿದ್ದು, ಇನ್ನು ನೆಲ ಅಂತಸ್ತುಗಳನ್ನು ಮಾತ್ರ  ಒಡೆಯುವುದು ಬಾಕಿಯಿದೆ. 5-10 ಕಟ್ಟಡಗಳಲ್ಲಿ ಮಾತ್ರ ಇನ್ನೂ 2, 3 ಅಂತಸ್ತುಗಳನ್ನು ಒಡೆಯುವ ಕೆಲಸ ಬಾಕಿಯಿದೆ. ಕೆಲವು ಮನೆಗಳನ್ನು ಮನೆ ಮಾಲೀಕರೇ ಒಡೆಯುತ್ತಾರೆ ಎಂದು ಜಿಲ್ಲಾಡಳಿತಕ್ಕೆ ಸ್ಪಷ್ಟನೆ ಸಿಕ್ಕಿದೆ.

ಆದ್ದರಿಂದ, ಹೊರೆಯೂ ಕಡಿಮೆಯಾದಂತಾಗಿತ್ತು. ಇಂಥ ಮನೆಗಳು ಕೆರೆ ಬದಿಯಲ್ಲಿದ್ದು, 2-3 ಅಡಿಗಳಷ್ಟು ಮಾತ್ರ ಒಡೆಯಬೇಕಿದೆ. ಆದರೆ ಈ  ಕೆಲಸವನ್ನು ಮಾಲೀಕರೇ ಮುಗಿಸುವುದಾಗಿ ಹೇಳಿದ್ದು, ಒತ್ತುವರಿ ತೆರವು ಮಾಡಲಾಗಿದೆಯೇ ಎಂದು ಪರಿಶೀಲಿಸಲು ಅಧಿಕಾರಿಗಳು ಭೇಟಿ  ನೀಡಿದರು.ಕಾರ್ಯಾಚರಣೆ ಮುಗಿದ ಬಳಿಕ ಈ ಪ್ರದೇಶವನ್ನು ಬಿಬಿಎಂಪಿಗೆ ನೀಡಲಿದ್ದು, ಕೆರೆ ಸುತ್ತ ಬೇಲಿ ಹಾಕಬೇಕಿದೆ. ಅಂಜನಾಪುರ ಕ್ವಾರಿಗೆ  ಕಟ್ಟಡ ತ್ಯಾಜ್ಯ ಸಾಗಿಸುವ ಕೆಲಸವನ್ನೂ ಚುರುಕುಗೊಳಿಸಲಾಗಿದೆ. ಪ್ರತಿದಿನ 100ಕ್ಕೂ ಅಧಿಕ ಲೋಡ್ ಕಟ್ಟಡ ತ್ಯಾಜ್ಯವನ್ನು ಸಾಗಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT