ಐಎಎಸ್ ಅಧಿಕಾರಿ ಡಿ.ಕೆ ರವಿ ದೇವಾಲಯ 
ಜಿಲ್ಲಾ ಸುದ್ದಿ

ಐಎಎಸ್ ಅಧಿಕಾರಿ ಡಿ.ಕೆ.ರವಿ ದೇವಾಲಯ ನಿರ್ಮಿಸಿದ ಅಭಿಮಾನಿಗಳು

ಪ್ರಾಮಾಣಿಕತೆಗೆ ಹೆಸರಾಗಿದ್ದ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢವಾಗಿ ಸಾವನ್ನಪ್ಪಿ 40 ದಿನ ಕಳೆದಿವೆ....

ಕೋಲಾರ: ಇದನ್ನೇ ನೋಡಿ ಅಭಿಮಾನ ಎನ್ನೋದು.  ಪ್ರಾಮಾಣಿಕತೆಗೆ ಹೆಸರಾಗಿದ್ದ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢವಾಗಿ ಸಾವನ್ನಪ್ಪಿ 40 ದಿನ ಕಳೆದಿವೆ. ಆದರೆ ಕೋಲಾರ ಜನತೆ ಪಾಲಿಗೆ ಸಾಕ್ಷಾತ್  ದೇವರಾಗಿದ್ದ ರವಿ ಅವರಿಗಾಗಿ ವೆಲಬಗುರ್ರೆ ಗ್ರಾಮದಲ್ಲಿ ದೇವಾಲಯ ನಿರ್ಮಿಸಲಾಗಿದೆ. 
ಕೋಲಾರ ಜಿಲ್ಲೆಯಲ್ಲಿ ಹದಿನಾಲ್ಕು ತಿಂಗಳ ಕಾಲ ಜನ ಮೆಚ್ಚಿದ ಜಿಲ್ಲಾಧಿಕಾರಿಯಾಗಿ ಭ್ರಷ್ಟಾಚಾರ ರಹಿತ ಸೇವೆ ನೀಡಿದ ಡಿ.ಕೆ ರವಿ ಅವರು ಮಾಡಿದ ಕೆಲಸಗಳು ಅಲ್ಲಿನ ಜನತೆಯ ಮನದಲ್ಲಿ ಶಾಶ್ವತವಾಗಿ ಉಳಿದಿವೆ. ಇದಕ್ಕೆ ಸಾಕ್ಷಿ ಎಂಬಂತೆ ದೇವಾಲಯ ನಿರ್ಮಾಣ ಮಾಡಿ ಪೂಜೆ ಸಲ್ಲಿಸುವುದರ ಜೊತೆಗೆ ಡಿ.ಕೆ ರವಿ ಅವರು ಕೈಗೊಂಡ ಜನಹಿತ ಸೇವೆಗಳ ಪೋಸ್ಟರ್ ಗಳನ್ನು ಹಾಕಿದ್ದಾರೆ. ಇದು ರವಿ ಅವರ ಬಗ್ಗೆ ಗ್ರಾಮಸ್ಥರಿಗಿರುವ ಅಭಿಮಾನವನ್ನು ಎತ್ತಿ ತೋರಿಸುತ್ತೆ. 
ಐಎಎಸ್ ಅಧಿಕಾರಿ ಡಿ.ಕೆ ರವಿ ಒಬ್ಬ ಆದರ್ಶ ವ್ಯಕ್ತಿಯಾಗಿದ್ದು, ರಾಜ್ಯದ ಪ್ರತಿಯೊಬ್ಬ ಅಧಿಕಾರಿಗೂ ಸ್ಫೂರ್ತಿಯಾಗಿ ಕಾರ್ಯ ನಿರ್ವಹಿಸಲಿ ಎಂಬ ಆಶಯದಲ್ಲಿ ಈ ದೇವಾಲಯ ನಿರ್ಮಿಸಲಾಗಿದೆ ಎಂಬುದು ಗ್ರಾಮಸ್ಥರ ಆಶಯವಾಗಿದೆ.  ಅವರು ಹಾಕಿಕೊಟ್ಟ ಹಾದಿಯಲ್ಲಿ  ನಡೆಯಬೇಕು ಎಂಬ ಕಾರಣಕ್ಕೆ  ಈ ದೇವಾಲಯ ನಿರ್ಮಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT