ಅಂಗಾಂಗ ದಾನಮಾಡಿದ ವಿಜಯ್ 
ಜಿಲ್ಲಾ ಸುದ್ದಿ

ವಿಜಯ್ ಅಂತ್ಯ ಸಂಸ್ಕಾರ ಇಂದು

ಮೆದುಳು ನಿಷ್ಕ್ರಿಯಗೊಂಡಿದ್ದ ಪೇಂಟರ್ ವಿಜಯ್ ದೇಹದಿಂದ ಕಣ್ಣು, ಲಿವರ್ ಮತ್ತು ಹೃದಯದ ರಕ್ಷಣಾ ಕವಾಟವನ್ನು ವೈದ್ಯರು ದಾನವಾಗಿ ಪಡೆದಿದ್ದಾರೆ...

ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಪೇಂಟರ್ ವಿಜಯ್ ದೇಹದಿಂದ ಕಣ್ಣು, ಲಿವರ್ ಮತ್ತು ಹೃದಯದ ರಕ್ಷಣಾ ಕವಾಟವನ್ನು ವೈದ್ಯರು ದಾನವಾಗಿ ಪಡೆದಿದ್ದಾರೆ.

ವಿಜಯ್ ಹೃದಯ ಮತ್ತು ಕಿಡ್ನಿ ಆರೋಗ್ಯವಾಗಿ ಇಲ್ಲದ ಕಾರಣಕ್ಕೆ ಅವುಗಳನ್ನು ಪಡೆದಿಲ್ಲ. ಲಿವರ್ ಭಾಗವನ್ನು ಮತ್ತೊಬ್ಬರಿಗೆ ಕಸಿ ಮಾಡುವ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ರವಾನಿಸಲಾಗಿದೆ. ಅದೇ ರೀತಿ ಹೃದಯ ಕವಾಟವನ್ನು ನಾರಾಯಣ ಹೃದಯಾಲಯಕ್ಕೆ ಒಪ್ಪಿಸಲಾಗಿದ್ದು, ಅಲ್ಲಿನ ವೈದ್ಯರ ನಿರ್ಧರದಂತೆ ಕಸಿ ಮಾಡುವ ಪ್ರಕ್ರಿಯೆ ನಡೆಯುತ್ತದೆ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಅಂಗಾಂಗ ಪಡೆದು ಬುಧವಾರ ಮಧ್ಯಾಹ್ನ 3 ಗಂಟೆಗೆ ವಿಜಯ್ ಮೃತ ದೇಹವನ್ನು ಪಾಲಕರಿಗೆ ಒಪ್ಪಿಸಿದರು. ಗುರುವಾರ ಮಧ್ಯಾಹ್ನ 2 ಗಂಟೆಗೆ ಹಳೆಗುಡ್ಡದಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT