ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರ ರಕ್ಷಣೆ

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ...

ಬೆಂಗಳೂರು: ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ.

ರಕ್ಷಣೆಗೊಳಗಾಗಿರುವ ಒಬ್ಬ ನಟಿ ತಮಿಳಿನ `ಮುತಲ್ ಮನಾವನ್' ಪ್ರಮುಖ ಪಾತ್ರದಲ್ಲಿ ನಟಿಸಿದ್ದಾಳೆ. ಅಲ್ಲದೇ ಕನ್ನಡ, ತಮಿಳು ಸೇರಿದಂತೆ ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ನಿರ್ವಹಿಸಿದ್ದಾಳೆ. ಮತ್ತೊಬ್ಬ ನಟಿ ರಾಜ್ಯದ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ `ಅಶ್ವಿನಿ ನಕ್ಷತ್ರ' ಮತ್ತು `ಬದುಕು' ಧಾರಾವಾಹಿಗಳಲ್ಲೂ ನಟಿಸಿದ್ದಾರೆ ಎಂದು ಪೊಲೀಸರು
ತಿಳಿಸಿದ್ದಾರೆ.

ಸಿನಿಮಾ ಧಾರಾವಾಹಿಗಳಲ್ಲಿ ಅವಕಾಶಕ್ಕಾಗಿ ಪರದಾಡುವ, ಬಡ ಹಾಗೂ ಮಧ್ಯಮ  ವರ್ಗದ ಯುವತಿ ಯರನ್ನು ಲಕ್ಷಾಂತರ ಹಣ ಗಳಿಸಬಹುದೆಂದು ಪುಸಲಾಯಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಸವಿತಾ(46), ಪುಷ್ಪಾ(32) ಮತ್ತು ವಿಜಯಾ(45)ರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಬನಶಂಕರಿ 2ನೇ ಹಂತ ಹೊಸಕೆರೆಹಳ್ಳಿ 7ನೇ ಮುಖ್ಯ ರಸ್ತೆಯಲ್ಲಿನ ವಸತಿ ಸಮುಚ್ಛಯದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಒಂದು ಮನೆಯಲ್ಲಿ ಪುಷ್ಪಾ ನೆಲೆಸಿದ್ದು, ಪಕ್ಕದಲ್ಲಿದ್ದ ಮತ್ತೊಂದು ಮನೆಯನ್ನು ಬಾಡಿಗೆ ಪಡೆದು ದಂಧೆಗೆ ಬಳಸುತ್ತಿದ್ದರು. ವೇಶ್ಯಾವಾಟಿಕೆ ದಂಧೆ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ
ಸಿಸಿಬಿ ಮಹಿಳಾ ಮತ್ತು ಮಾದಕದ್ರವ್ಯ ದಳ ಪೊಲೀಸರು ದಾಳಿ ನಡೆಸಿದಾಗ ದಂಧೆ ಬಯಲಾಗಿದೆ. ನಟಿಯರು ಮಾತ್ರವಲ್ಲದೆ, ರಾಜ್ಯದ ಬೇರೆ ಬೇರೆ ಭಾಗಗಳಿಂದ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT