ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರ ರಕ್ಷಣೆ

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ...

ಬೆಂಗಳೂರು: ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ.

ರಕ್ಷಣೆಗೊಳಗಾಗಿರುವ ಒಬ್ಬ ನಟಿ ತಮಿಳಿನ `ಮುತಲ್ ಮನಾವನ್' ಪ್ರಮುಖ ಪಾತ್ರದಲ್ಲಿ ನಟಿಸಿದ್ದಾಳೆ. ಅಲ್ಲದೇ ಕನ್ನಡ, ತಮಿಳು ಸೇರಿದಂತೆ ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ನಿರ್ವಹಿಸಿದ್ದಾಳೆ. ಮತ್ತೊಬ್ಬ ನಟಿ ರಾಜ್ಯದ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ `ಅಶ್ವಿನಿ ನಕ್ಷತ್ರ' ಮತ್ತು `ಬದುಕು' ಧಾರಾವಾಹಿಗಳಲ್ಲೂ ನಟಿಸಿದ್ದಾರೆ ಎಂದು ಪೊಲೀಸರು
ತಿಳಿಸಿದ್ದಾರೆ.

ಸಿನಿಮಾ ಧಾರಾವಾಹಿಗಳಲ್ಲಿ ಅವಕಾಶಕ್ಕಾಗಿ ಪರದಾಡುವ, ಬಡ ಹಾಗೂ ಮಧ್ಯಮ  ವರ್ಗದ ಯುವತಿ ಯರನ್ನು ಲಕ್ಷಾಂತರ ಹಣ ಗಳಿಸಬಹುದೆಂದು ಪುಸಲಾಯಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಸವಿತಾ(46), ಪುಷ್ಪಾ(32) ಮತ್ತು ವಿಜಯಾ(45)ರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಬನಶಂಕರಿ 2ನೇ ಹಂತ ಹೊಸಕೆರೆಹಳ್ಳಿ 7ನೇ ಮುಖ್ಯ ರಸ್ತೆಯಲ್ಲಿನ ವಸತಿ ಸಮುಚ್ಛಯದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಒಂದು ಮನೆಯಲ್ಲಿ ಪುಷ್ಪಾ ನೆಲೆಸಿದ್ದು, ಪಕ್ಕದಲ್ಲಿದ್ದ ಮತ್ತೊಂದು ಮನೆಯನ್ನು ಬಾಡಿಗೆ ಪಡೆದು ದಂಧೆಗೆ ಬಳಸುತ್ತಿದ್ದರು. ವೇಶ್ಯಾವಾಟಿಕೆ ದಂಧೆ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ
ಸಿಸಿಬಿ ಮಹಿಳಾ ಮತ್ತು ಮಾದಕದ್ರವ್ಯ ದಳ ಪೊಲೀಸರು ದಾಳಿ ನಡೆಸಿದಾಗ ದಂಧೆ ಬಯಲಾಗಿದೆ. ನಟಿಯರು ಮಾತ್ರವಲ್ಲದೆ, ರಾಜ್ಯದ ಬೇರೆ ಬೇರೆ ಭಾಗಗಳಿಂದ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT