ಚಂದ್ರಶೇಖರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಸಂತ್ರಸ್ತ ಭಾರತೀಯರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಚಂದ್ರಶೇಖರ ಸ್ವಾಮೀಜಿ

ನೇಪಾಳ ಭೂಕಂಪದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹಾಗೂ ನೇಪಾಳಕ್ಕೆ ಪ್ರವಾಸಕ್ಕೆ ತೆರಳಿರುವ ಭಾರತೀಯರ ರಕ್ಷಣೆಗೆ ನೇಪಾಳ ಸರ್ಕಾರದ ಆದ್ಯಾತ್ಮಿಕ ಸಲಹೆಗಾರ, ಅಂತರಾಷ್ಟ್ರೀಯ ಖ್ಯಾತಿಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಕಠ್ಮಂಡುವಿಗೆ ತೆರಳಿದ್ದಾರೆ.

ಮೂಲ್ಕಿ: ನೇಪಾಳ ಭೂಕಂಪದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹಾಗೂ ನೇಪಾಳಕ್ಕೆ ಪ್ರವಾಸಕ್ಕೆ ತೆರಳಿರುವ ಭಾರತೀಯರ ರಕ್ಷಣೆಗೆ ನೇಪಾಳ ಸರ್ಕಾರದ ಆದ್ಯಾತ್ಮಿಕ  ಸಲಹೆಗಾರ, ಅಂತರಾಷ್ಟ್ರೀಯ ಖ್ಯಾತಿಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಕಠ್ಮಂಡುವಿಗೆ ತೆರಳಿದ್ದಾರೆ.
ಹಲವು ಸಾಮಾಜಿಕ, ಶೈಕ್ಷಣಿಕ, ಕಾರ್ಯಕ್ರಮಗಳಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಟ್ರಸ್ಟ್ ಮೂಲಕ ತಮ್ಮನ್ನು ತೊಡಗಿಸಿಕೊಂಡಿರುವ ಸ್ವಾಮೀಜಿಯವರ ಆದ್ಯಾತ್ಮಿಕ ಪ್ರಜ್ಞೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ನೇಪಾಳ ಸರ್ಕಾರ ತಮ್ಮ ದೇಶದ ಆಧ್ಯಾತ್ಮಿಕ ಸಲಹೆಗಾರರನ್ನಾಗಿ ನೇಮಿಸಿದೆ.  ಭೂಕಂಪದ ವಿಷಯ ತಿಳಿದು ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಅವರು ಕೂಡಲೇ ದೆಹಲಿ ಮೂಲಕ ನೇಪಾಳ ತಲುಪಿದ್ದಾರೆ.

ವಿಶ್ವದಲ್ಲಿ ಐತಿಹಾಸಿಕ ಪರಂಪರೆಯನ್ನು ಹೊಂದಿರುವಂಥ ನೇಪಾಳದ ಪಶುಪತಿ ದೇವಾಲಯದಲ್ಲಿನ ಶುಚಿತ್ವದ ಕೊರತೆ ಹಾಗೂ ದೇವಳದ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ದೇವಾಲಯ ಕಳಾಹೀನವಾಗಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರೂ ಸರಿಪಡಿಸದಿರುವುದರಿಂದ ಇಂತಹ ಘಟನೆ ಸಂಭವಿಸಿದೆ.ಪ್ರಕೃತಿ ವಿಕೋಪವನ್ನು ತಡೆಯಲು ಅಸಾಧ್ಯ, ಯಾಗ, ಯಜ್ಞಗಳ ಮೂಲಕ ಪ್ರಕೃತಿಯನ್ನು ಶಾಂತಪಡಿಸಲು ಸಾಧ್ಯವಿದ್ದು, ದೇವಾಲಯದ ಅಸ್ತವ್ಯಸ್ತ ಬಗ್ಗೆ ನೇಪಾಳದ ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಭಾರತೀಯರ ರಕ್ಷಣೆಗೆ ಕ್ರಮ
ಭೂಕಂಪದಲ್ಲಿ ಸಿಲುಕಿಕೊಂಡಿರುವ  ಭಾರತೀಯರ ರಕ್ಷಣೆಗೆ ತಮ್ಮ ಆಶ್ರಮದ ಮೂಲಕ ದೆಹಲಿಯಲ್ಲಿ ಸಂತ್ರಸ್ತರ  ಶಿಬಿರ ಆರಂಭಿಸಿದ್ದು, ಸಂಬಂಧಿಕರು ತಮ್ಮ ಶಿಬಿರವನ್ನು
ಸಂಪರ್ಕಿಸಿದ್ದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಅವರನ್ನು ಭಾರತಕ್ಕೆ ಕರೆತರುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಸ್ವಾಮೀಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT