ಯು.ಟಿ ಖಾದರ್ 
ಜಿಲ್ಲಾ ಸುದ್ದಿ

ಆರೋಗ್ಯ ಮಾಹಿತಿ ಆ್ಯಪ್

ಆ್ಯಪ್ ಮೂಲಕ ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ಸೌಲಭ್ಯ ಪಡೆಯುವ ಫಲಾನುಭವಿ, ತಾನು ಆಯ್ಕೆ ಮಾಡಿಕೊಂಡ ಆಸ್ಪತ್ರೆಗೆ ಇರುವ ದೂರ ತಿಳಿಯುವುದರ ಜೊತೆಗೆ ಯೋಜನೆಯಲ್ಲಿ ನೋಂದಣಿಗೊಂಡಿರುವ ಆಸ್ಪತ್ರೆಗಳ ವಿವರ........

ಬೆಂಗಳೂರು: ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮೊಬೈಲ್ ಆ್ಯಪ್ ರಾಜ್ಯದ ಎಲ್ಲ ಎಪಿಎಲ್ ಕಾರ್ಡುದಾರರಿಗೆ ಲಭ್ಯವಾಗಲಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಇಂಥ ಆ್ಯಪ್ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಆ್ಯಪ್ ಮೂಲಕ ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ಸೌಲಭ್ಯ ಪಡೆಯುವ  ಫಲಾನುಭವಿ, ತಾನು ಆಯ್ಕೆ ಮಾಡಿಕೊಂಡ ಆಸ್ಪತ್ರೆಗೆ ಇರುವ ದೂರ ತಿಳಿಯುವುದರ ಜೊತೆಗೆ ಯೋಜನೆಯಲ್ಲಿ ನೋಂದಣಿಗೊಂಡಿರುವ ಆಸ್ಪತ್ರೆಗಳ ವಿವರ, ಲಭ್ಯ ಚಿಕಿತ್ಸಾ ವಿಧಾನಗಳನ್ನು ಹಾಗೂ ಅರೆ ಖಾಸಗಿ ವಾರ್ಡಗಳ ದರಗಳ ಮಾಹಿತಿಯನ್ನು ಪಡೆಯಬಹುದು ಎಂದರು.
ರಾಜೀವ್ ಆರೋಗ್ಯ ಭಾಗ್ಯ ಯೋಜನೆ ಫಲಾನುಭವಿಗಳು ಯಾವುದೇ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಅರೆ ಖಾಸಗಿ ಅಥವಾ ಖಾಸಗಿ ವಾರ್ಡ್ ಗಳು ವಿಧಿಸುವ ದರಗಳು, ಆಸ್ಪತ್ರೆಯಿಂದ ಆಸ್ಪತ್ರೆಗೆ ವೆಚ್ಚದ ಹೋಲಿಕೆ, ಜತೆಗೆ ಅನುಕೂಲಕರ ಸ್ಥಳದ ಆಸ್ಪತ್ರೆ ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಆ್ಯಪ್ ರೂಪಿಸಲಾಗಿದೆ. ಯೋಜನೆಯಡಿ ಮಾರಣಾಂತಿಕ ಕಾಯಿಲೆಗಳಾದ ಹೃದಯ ರೋಗ, ಕ್ಯಾನ್ಸರ್, ನರರೋಗ, ಮೂತ್ರ ಪಿಂಡದ ಕಾಯಿಲೆ, ಅಪಘಾತ, ಸುಟ್ಟಗಾಯ, ಹಾಗೂ ನವಜಾತ ಶಿಶುಗಳು ಮತ್ತು ಮಕ್ಕಳ ಕಾಯಿಲೆಗೆ ಸಂಬಂಧಿಸಿದಂತೆ  ಒಟ್ಟು 449 ಬಗೆಯ ಚಿಕಿತ್ಸೆ ಒದಗಿಸಲಾಗಿದೆ. ರಾಜ್ಯಾದ್ಯಂತ 132 ಆಸ್ಪತ್ರೆಗಳನ್ನು ನೋಂದಾಯಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT