ಎಂ.ಎನ್ ರೆಡ್ಡಿ 
ಜಿಲ್ಲಾ ಸುದ್ದಿ

ನಗರ ಪೊಲೀಸ್ ಆಯುಕ್ತ ರೆಡ್ಡಿಗೆ ಸಿಬಿಐ ನೋಟಿಸ್

ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ತಂಡದ ತನಿಖೆಯ ದೃಷ್ಟಿ ಈಗ ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಕಡೆ ತಿರುಗಿದೆ. ಸೋಮವಾರ ಆಯುಕ್ತರನ್ನು ಭೇಟಿ ಮಾಡಿದ......

ಬೆಂಗಳೂರು: ಐಎಎಸ್ ಅಧಿಕಾರಿ  ಡಿ.ಕೆ ರವಿ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ತಂಡದ ತನಿಖೆಯ ದೃಷ್ಟಿ ಈಗ ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಕಡೆ ತಿರುಗಿದೆ. ಸೋಮವಾರ ಆಯುಕ್ತರನ್ನು ಭೇಟಿ ಮಾಡಿದ ತನಿಖಾ ತಂಡ ಅರ್ಧಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಮಾತುಕತೆ ನಡೆಸಿದ್ದು ಇದಕ್ಕೆ ಪುಷ್ಠಿ ನೀಡಿದೆ.
ರವಿ ಅವರ ನಿಗೂಢ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಎಸ್.ಪಿ ಬಾಲ ಸುಬ್ರಮಣ್ಯ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ, ಸೋಮವಾರ ಮಧ್ಯಾಹ್ನ 3.30ಕ್ಕೆ ಆಯುಕ್ತರ ಕಚೇರಿಗೆ ಆಗಮಿಸಿತ್ತು.

ಪ್ರಕರಣದ ವಿಚಾರಣೆಗೆ ಹಾಜರಾಗುವ ಸಂಬಂಧ ನೋಟಿಸ್ ನೀಡುವುದಕ್ಕಾಗಿಯೇ ಸಿಬಿಐ ಅಧಿಕಾರಿಗಳು ಆಯುಕ್ತರನ್ನು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಇದನ್ನು ಅಲ್ಲಗಳೆದಿದ್ದಾರೆ.

ತನಿಖಾ ಕಾರ್ಯಗಳಿಗೆ  ಎರಡು ವಾಹನ, ಲ್ಯಾಪ್ ಟ್ಯಾಪ್, ಕ್ವಾಟ್ರಸ್, ವೈಫೈ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಒದಗಿಸಬೇಕೆಂಬ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ಅವರಿಗೆ ಒಂದು ಮನವಿ ಪತ್ರ ಸಲ್ಲಿಸಿತ್ತು. ಆ ಪತ್ರದೊಂದಿಗೆ ಸೋಮವಾರ ಆಯುಕ್ತರನ್ನು ಭೇಟಿ ಮಾಡಿ, ತಮಗೆ ಅಗತ್ಯವಾಗಿ ಬೇಕಾಗಿರುವ ಮೂಲ ಸೌಕರ್ಯ ನೀಡುವಂತೆ ಚರ್ಚಿಸಿದೆ. ನೋಟಿಸ್ ವಿಚಾರ
ಪ್ರಸ್ತಾಪವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆಯುಕ್ತರ ಜೊತೆಗೆ ಹೆಚ್ಚುವರಿ  ಪೊಲೀಸ್  ಆಯುಕ್ತ (ಆಡಳಿತ) ಹರಿ ಶೇಖರ್ ಅವರನ್ನು ಕೂಡ  ಸಿಬಿಐ ಅಧಿಕಾರಿಗಳ ತಂಡ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು. ಸಾವಿನ ವೇಳೆ ಎಂ.ಎನ್ ರೆಡ್ಡಿ ಅದೊಂದು ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT