ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಠ ಆಸ್ತಿ ವಿವಾದ: ಅರ್ಜಿ ಮಾನ್ಯ ಮಾಡಿದ ಕೋರ್ಟ್

ರಾಘವೇಂದ್ರ ಸ್ವಾಮಿ ಮತ್ತು ಉತ್ತರಾದಿ ಮಠದ ಆಸ್ತಿ ವಿವಾದ ಹಾಗೂ ಆರಾಧನಾ ಮಹೋತ್ಸವಕ್ಕೆ ಅಡ್ಡಿ ಪಡಿಸಬಾರದೆಂದು...

ಬೆಂಗಳೂರು: ರಾಘವೇಂದ್ರ ಸ್ವಾಮಿ ಮತ್ತು ಉತ್ತರಾದಿ ಮಠದ ಆಸ್ತಿ ವಿವಾದ ಹಾಗೂ ಆರಾಧನಾ ಮಹೋತ್ಸವಕ್ಕೆ ಅಡ್ಡಿ ಪಡಿಸಬಾರದೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯ ಭಾಗಶಃ ಮಾನ್ಯ ಮಾಡಿದೆ.

ರಾಘವೇಂದ್ರ ಸ್ವಾಮಿ ಮಠದ ಪರ ಪ್ರತಿನಿಧಿಗಳು, ಸೇವಕರು ಹಾಗೂ ಭಕ್ತಾದಿಗಳು ದಾವಾ ಆಸ್ತಿಗೆ ಪ್ರವೇಶಿಸಬಾರದು. ಆಸ್ತಿಯ ಸ್ವಾಧೀನಾನುಭವಕ್ಕೆ ಮತ್ತು ಪ್ರತಿವರ್ಷ ನಡೆಸುವ ಆರಾಧನಾ ಮಹೋತ್ಸವಕ್ಕೆ ಯಾವ ರೀತಿಯೂ
ಅಡ್ಡಿಪಡಿಸಬಾರದು ಎಂದು ಕೋರಿ ಅಧೀನ ನ್ಯಾಯಾಲಯದಲ್ಲಿ ಅರ್ಜಿ ದಾಖಲಾಗಿತ್ತು.

ವಿಚಾರಣೆ ನಡೆಸಿದ ಅಧೀನ ನ್ಯಾಯಾಲಯ, ಅರ್ಜಿದಾರರ ಮನವಿಯನ್ನು ಭಾಗಶಃ ಪರಿಗಣಿಸಿದೆ. ಪ್ರತಿವಾದಿಗಳು ವೃಂದಾವನ ಪೂಜೆ, ಆರಾಧನೆಯನ್ನು ಕೈಗೊಳ್ಳಬಹುದು ಎಂದು ಅಧೀನ ನ್ಯಾಯಾಲಯ ಆದೇಶದಲ್ಲಿ
ಸ್ಪಷ್ಟಪಡಿಸಿದೆ.

ಈ ಕುರಿತು ಅರ್ಜಿದಾರರು ಪತ್ರಿಕೆಗಳಲ್ಲಿ ನ್ಯಾಯಾಲಯದ ಆದೇಶವನ್ನು ವ್ಯತಿರಿಕ್ತವಾಗಿ ಬಿಂಬಿಸಿ ಭಕ್ತರಿಗೆ ತಪ್ಪು ಸಂದೇಶ ರವಾನಿಸಿದ್ದರು. ಆದರೆ ಅಧೀನ ನ್ಯಾಯಾಲಯದ ಆದೇಶ ಅದಕ್ಕೆ ವ್ಯತಿರಿಕ್ತವಾಗಿದೆ ಎಂದು ರಾಘವೇಂದ್ರ ಸ್ವಾಮಿ ಮಠದ ಆಪ್ತ ಕಾರ್ಯದರ್ಶಿ ಸುಯಮೀಂದ್ರಾಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT