ಖಾಸಗಿ ಬಸ್ ಸೇವೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸರಣಿ ರಜೆ: ಪ್ರಯಾಣಿಕರ ಜೇಬಿಗೆ ಕತ್ತರಿ

ಸಾರಿಗೆ ಮುಷ್ಕರ, ಕಾರ್ಮಿಕರ ದಿನಾಚರಣೆ ಸೇರಿದಂತೆ ಈ ವಾರಾಂತ್ಯದಲ್ಲಿರುವ ಸರಣಿ ರಜೆಗಳು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಿವೆ..

ಬೆಂಗಳೂರು: ಸಾರಿಗೆ ಮುಷ್ಕರ, ಕಾರ್ಮಿಕರ ದಿನಾಚರಣೆ ಸೇರಿದಂತೆ ಈ ವಾರಾಂತ್ಯದಲ್ಲಿರುವ ಸರಣಿ ರಜೆಗಳು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಿವೆ.

ಗುರುವಾರ ಸಾರಿಗೆ ಮುಷ್ಕರ, ಶುಕ್ರವಾರ ಕಾರ್ಮಿಕರ ದಿನಾಚರಣೆ. ಹೀಗಾಗಿ ವಾರಾಂತ್ಯದ ಸರಣಿ ರಜೆಗಳಲ್ಲಿ ಬೆಂಗಳೂರಿನಿಂದ ಹೊರ ಊರಿಗೆ ಪ್ರಯಾಣಿಸುವವರ ಜೇಬಿಗೆ ಕತ್ತರಿ ಬೀಳಲಿದೆ.

ವಾರಾಂತ್ಯದ ಸರಣಿ ರಜೆಗಳ ಲಾಭ ಪಡೆಯುವ ಉದ್ದೇಶದಿಂದ ಖಾಸಗಿ ಬಸ್‌ ಮಾಲೀಕರು ಟಿಕೆಟ್‌ ದರಗಳನ್ನು ಹೆಚ್ಚಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ, ಮಂಗಳೂರು, ವಿಜಯಪುರ, ಕಲಬುರಗಿ, ಬೀದರ್‌ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾಗುವ ಸ್ಲೀಪರ್, ಸೆಮಿ ಸ್ಲೀಪರ್, ವೊಲ್ವೋ ಸೇರಿದಂತೆ ವಿವಿಧ ಬಸ್ಸುಗಳ ಪ್ರಯಾಣ ದರದಲ್ಲಿ ಹೆಚ್ಚಳವಾಗಿದೆ.

ಖಾಸಗಿ ಬಸ್ಸುಗಳಲ್ಲಿನ ಪ್ರಯಾಣ ದರ ಶೇ.10ರಿಂದ 12ರಷ್ಟು ಹೆಚ್ಚಳವಾಗಿದ್ದು, 700 ರುಗಳ ಟಿಕೆಟ್ ದರ 900 ರೂ.ಗೆ ಏರಿಕೆಯಾಗಿದೆ. 1,200 ರೂ. ಇರುವ ದರ 1,600 ರೂ. ವರೆಗೆ ಏರಿಕೆಯಾಗಿದ್ದು, ಜನರು ಹೆಚ್ಚಿನ ಹಣ ಪಾವತಿ ಮಾಡಿ ಪ್ರಯಾಣ ಮಾಡುವುದು ಅನಿವಾರ್ಯವಾಗಿದೆ. ಬುಧವಾರದಿಂದಲೇ ಮುಂಗಡ ಟಿಕೆಟ್‌ ಬುಕ್ಕಿಂಗ್ ಆರಂಭವಾಗಿದ್ದು, ದುಬಾರಿ ಹಣ ನೀಡಿಯೇ ಪ್ರಯಾಣಿಕರು ತಮ್ಮ-ತಮ್ಮ ಟಿಕೆಟ್ ಗಳನ್ನು ಕಾಯ್ದಿರಿಸುತ್ತಿದ್ದಾರೆ.

ಟಿಕೆಟ್ ದರ ಏರಿಕೆಯಾದರೂ ಪ್ರಯಾಣ ಅನಿವಾರ್ಯ, ಹೀಗಾಗಿ ದುಬಾರಿ ಹಣ ನೀಡಿ ಊರಿಗೆ ತೆರಳುತ್ತಿದ್ದೇವೆ ಎಂದು ಪ್ರಯಾಣಿಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT