ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಾಲ ಬಾಧೆ, ಬೆಳೆ ನಷ್ಟ: ಮತ್ತೆ ನಾಲ್ವರು ರೈತರು ಆತ್ಮಹತ್ಯೆ

ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಒಟ್ಟು ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ....

ಮಂಡ್ಯ : ರೈತರ ಸರಣಿ ಆತ್ಮಹತ್ಯೆ ಇನ್ನೂ ಮುಂದುವರಿಯುತ್ತಲೇ ಇದ್ದು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಒಟ್ಟು ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಪಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ನಿವಾಸಿ ದೇವರಾಜ (23) ಎಂಬುವವರು ಬೆಳೆನಷ್ಟ ಹಾಗೂ ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅದೇ ವೇಳೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಲಗೂರು ಹೋಬಳಿ ಕಲ್ಲಕಟ್ಟ ಗ್ರಾಮದ ನಿವಾಸಿ ಉಮೇಶ್ (36) ಎಂಬ ರೈತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದರುವ ಬಗ್ಗೆಯೂ ವರದಿಯಾಗಿದೆ. ಇವರು ಮಳೆ ಬಾರದೆ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಯಾದಗಿರಿ ತಾಲೂಕಿನ ಗುಂಜನೂರು ಗ್ರಾಮದ ತಾಯಮ್ಮ (40) ಎಂಬ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶಿಡ್ಲಘಟ್ಟ ತಾಲೂಕಿನ ಎಣ್ಣಂದೂರು ಗ್ರಾಮದ ಮುನಿಸ್ವಾಮಪ್ಪ (40) ಎಂಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ; ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ ನಲ್ಲಿ 'ರೋಬೋಡಾಗ್' ವಿವಾದ, ಕ್ಷಮೆಯಾಚಿಸಿದ ಗ್ಯಾಲ್ಗೋಟಿಯಾಸ್ ವಿವಿ!

ಕಸ ವಿಲೇವಾರಿಗೆ ಅಡ್ಡಿ: ನಿಮ್ಮ ಮನೆ ಮುಂದೆಯೇ ಕಸ ಹಾಕಿಸ್ತೀನಿ- ಬಿಜೆಪಿ ನಾಯಕರಿಗೆ ಡಿಕೆಶಿ ವಾರ್ನಿಂಗ್! Video

SCROLL FOR NEXT