ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಡಿ.ಕೆ ರವಿ ಪ್ರಕರಣ: ನಗರಕ್ಕೆ ಶೀಘ್ರ ಏಮ್ಸ್ ತಜ್ಞ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಗುಪ್ತಾ ಅವರು ಎರಡು ದಿನಗಳ ಕಾಲ ನಗರದಲ್ಲೇ ತಂಗುವ ನಿರೀಕ್ಷೆ ಇದೆ. ಆ ಸಮಯದಲ್ಲಿ ಡಿ.ಕೆ.ರವಿ
ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾದ ಕೋರಮಂಗಲದ ಫ್ಲಾಟ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ.ರವಿ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ನಿಖರವಾಗಿ ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಆದ್ದರಿಂದ ಈ ಪ್ರಕರಣದ ಮರಣೋತ್ತರ ವರದಿಯ ಬಗ್ಗೆ ತಜ್ಞರ ಅಬಿsಪ್ರಾಯ ಪಡೆಯಲು ಸಿಬಿಐ ನಿರ್ಧರಿಸಿದೆ. ಅದಕ್ಕಾಗಿ ಏಮ್ಸ್ ವೈದ್ಯರ ಸಹಾಯ ಕೋರಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಾ ನಗರಕ್ಕೆ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT