ಮತದಾನ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಪಾಲಿಕೆ ಚುನಾವಣೆ: ಶೇ.65 ರಷ್ಟು ಮತದಾನದ ಗುರಿ

ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ಐಟಿ-ಬಿಟಿ ಕ್ಷೇತ್ರದ ಮತದಾರರನ್ನು ಹೇಗಾದರೂ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಬೆಂಗಳೂರು: ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ಐಟಿ-ಬಿಟಿ ಕ್ಷೇತ್ರದ ಮತದಾರರನ್ನು ಹೇಗಾದರೂ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಚುನಾವಣೆ ಕಾವು ದಿಢೀರ್ ಏರುತ್ತಿದ್ದಂತೆ ಆಯೋಗದ ಅಂಗಸಂಸ್ಥೆಯಂತೆ ಕೆಲಸ ಮಾಡಬೇಕಿರುವ ಬಿಬಿಎಂಪಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರತಿ ಬಾರಿಯೂ ಬೆಂಗಳೂರಿನಲ್ಲಿ ನಡೆಯುವ ಚುನಾವಣೆಯಲ್ಲಿ ಕೊಳಗೇರಿ ನಿವಾಸಿಗಳು ಮತ್ತು ಇತರೆ ಪ್ರದೇಶಗಳ ಮಧ್ಯಮ ವರ್ಗದವರು ಮಾತ್ರ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಸುಶಿಕ್ಷಿತರು ಎನ್ನಿಸಿಕೊಳ್ಳುವವರೇ ಮತದಾನದಲ್ಲಿ ಭಾವಹಿಸದೇ ಇರುವುದರಿಂದ ಪ್ರತಿ ಚುನಾವಣೆಯಲ್ಲೂ ಬೆಂಗಳೂರು ಶೇ.46 ರಷ್ಟು ಮತದಾನವನ್ನು ದಾಟುತ್ತಿಲ್ಲ.

ಹೀಗಾಗಿ ಬಿಬಿಎಂಪಿ ಈ ಬಾರಿ ಹೇಗಾದರೂ ಮಾಡಿ ನಗರದಲ್ಲಿ ಶೇ.40 ರಷ್ಟು ಮತದಾನ ದಾಖಲಾಗುವಂತೆ ಮಾಡಬೇಕೆಂದು ಪಣ ತೊಟ್ಟಿದೆ. ಇದಕ್ಕಾಗಿ ಸಾಮಾಜಿಕ ಜಾಲ, ಬೀದಿ ನಾಟಕ, ಮೆರವಣಿಗೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಿದೆ. ಮತದಾನ ಜಾಗೃತಿ ಕುರಿತ ಮೊದಲ ಕಾರ್ಯಕ್ರಮ ಮಂಗಳವಾರ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆ ಬಳಿ ನಡೆಯಲಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಚಾಲನೆ ನೀಡಲಿದ್ದಾರೆ. ಅದೇ ರೀತಿ ಆ.5 ರಂದು ಬಿಬಿಎಂಪಿ ಕಚೇರಿ ಆವರಣದಲ್ಲೂ ಮತ್ತು ಇತರ ವಲಯಗಳಲ್ಲೂ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯುವಜನಾಂಗವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಪದವಿ ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಮತ್ತು ಸ್ಲಂ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ.

ರಂಗೋಲಿ ಜಾಗೃತಿ: ಈ ಬಾರಿ ಚುನಾವಣೆಯಲ್ಲಿ ನಡೆಸುವ ಮತ್ತೊಂದು ವಿನೂತನ ಕಾರ್ಯಕ್ರಮವೆಂದರೆ ಪ್ರತಿ ದಿನ ಮುಂಜಾನೆ ಮನೆ ಮನೆ ಮುಂದೆ ರಂಗೋಲಿ ಹಾಕಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ತಮ್ಮ ಹಕ್ಕು ಚಲಾವಣೆಗೆ ಮುಂದಾಗಲು ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆ ಮತ ನೀಡಲು ಮುಂದಾದರೆ ಕುಟುಂಬದ ಸದಸ್ಯರು ಜಾಗೃತರಾಗಲಿದ್ದಾರೆ ಎಂಬುದು ಇದರ ಹಿಂದಿನ ಉದ್ದೇಶ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT