ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ 
ಜಿಲ್ಲಾ ಸುದ್ದಿ

ಆರೋಪಪಟ್ಟಿ ಸಲ್ಲಿಕೆ ವಿಳಂಬಕ್ಕೆ ಆಯೋಗ ಆಕ್ಷೇಪ

ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರು ರಾಮಕಥಾ ಗಾಯಕಿ ಪ್ರೇಮ ಲತಾ ದಿವಾಕರ್ ಮೇಲೆ ನಡೆಸಿರುವ ಅತ್ಯಾಚಾರ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರು ರಾಮಕಥಾ ಗಾಯಕಿ ಪ್ರೇಮ ಲತಾ ದಿವಾಕರ್ ಮೇಲೆ ನಡೆಸಿರುವ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಐಡಿ ವಿಳಂಬ ಮಾಡುತ್ತಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಐಡಿ ವಿಳಂಬ ನೀತಿ ಆರೋಪ ಹಿನ್ನೆಲೆಯಲ್ಲಿ ಕುಮಾರ ಮಂಗಳಂ ನೇತೃತ್ವದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯಕ್ಕೆ ಆಗಮಿಸಿ ಪ್ರೇಮಲತಾ ಹಾಗೂ ಪೋಲೀಸರಿಂದ ಮಾಹಿತಿ ಪಡೆದರು.
ಬೆಂಗಳೂರಿಗೆ ಬಂದಿಳಿದು ನೇರವಾಗಿ ಪ್ರೇಮಲತಾ ಅವರ ಬನಶಂಕರಿಯಲ್ಲಿರುವ ನಿವಾಸಕ್ಕೆ ತೆರಳಿ, ಪ್ರೇಮಲತಾ ಹಾಗೂಕುಟುಂಬ ಸದಸ್ಯರ ಜತೆ ಸುದೀರ್ಘ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 3 ತಿಂಗಳ ಹಿಂದೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಎರಡು ಬಾರಿ ಆಯೋಗದ ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಇದೀಗ ಮೊದಲ ಬಾರಿಗೆ ಪ್ರೇಮಲತಾ ದಂಪತಿಯನ್ನು ಸಂಪರ್ಕ ಮಾಡಿ ಅವರಿಂದ ಹೇಳಿಕೆ ಪಡೆಯಲಾಗಿದೆ ಎಂದರು.
ನಿರಂತರವಾಗಿ ಬೆದರಿಕೆಗಳು ಬರುತ್ತಿವೆ. ಬೇರೆ ಬೇರೆ ಠಾಣೆ ಗಳಲ್ಲಿ ಈಗಾಗಲೇ ದೂರು ದಾಖಲಿಸಲಾಗಿದೆ. ತನಿಖೆ ನಡೆಯುವ ಸ್ಥಳಗಳಿಗೆ ಹೋದರೆ ಅವಮಾನಕಾರಿಯಾಗಿ ಮಾತನಾಡುತ್ತಾರೆ, ನಿಂದಿಸಿ, ಬೆದರಿಕೆ ಒಡ್ಡುತ್ತಾರೆ.ಈ ಮೂಲಕ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂದು ಪ್ರೇಮಲತಾ ಹೇಳಿದ್ದಾರೆ. ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ಸಿಐಡಿ ಪೊಲೀಸರನ್ನು ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿ ತನಿಖೆ ವಿಳಂಬ ಕುರಿತು ಮಾಹಿತಿ ಪಡೆಯಲಾಗುತ್ತದೆ. ಆಗ ಮಾತ್ರ ಪ್ರಕರಣದ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯ ಎಂದರು. ರಾಮಕಥಾ ಗಾಯಕಿಯಾಗಿರುವ ಪ್ರೇಮಲತಾ ದಿವಾಕರ್ ಅವರ ಮೇಲೆ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರಶ್ರೀ ನಿರಂತರವಾಗಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಕೊಲೆ ಬೆದರಿಕೆಯು ಇದೆ ಎಂದು ಆರೋಪಿಸಿ ಪ್ರೇಮಲತಾ ಅವರು ಹೊನ್ನಾವರ, ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಆದರೆ, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ವಿಳಂಬಗೊಳಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೊಂದೆಡೆ, ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಪ್ರೇಮಲತಾ ಅವರ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದರಾಜ್ಯದ ವಿವಿಧ ನಗರಗಳು ಹಾಗೂ ಹೊರ ರಾಜ್ಯಗಳಿಗೂ ಅವರನ್ನು ಕರೆದೊಯ್ದು ಮಾಹಿತಿ ಸಂಗ್ರಹಿಸಿದ್ದಾರೆ.

ಭಯದ ವಾತಾವರಣ
ಸಿಐಡಿ ತನಿಖಾಧಿಕಾರಿಗಳು ಒನ್‍ಸೈಡ್ ತನಿಖೆ ಮಾಡುತ್ತಿದ್ದಾರೆ. ಇತ್ತ ಪ್ರಕರಣದಲ್ಲಿ ನೊಂದ ಮಹಿಳೆಯಾಗಿರುವ ನಾನು ಹಾಗೂ ನನ್ನ ಕುಟುಂಬದ ಮೇಲೆ ಭಯದ ವಾತಾವರಣ ಸೃಷ್ಟಿಸಿ ಪ್ರಕರಣವನ್ನು ಸಂಪೂರ್ಣ ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿವೆ. ನಮಗೆ ಸೂಕ್ತ ರಕ್ಷಣೆ ಜತೆಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ನ್ಯಾಯ ಸಿಗುವ ಭರವಸೆ ಇದೆ ಎಂದು
ಗಾಯಕಿ ಪ್ರೇಮಲತಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT