ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ 
ಜಿಲ್ಲಾ ಸುದ್ದಿ

ಹಿಂದೆಂದೂ ನೋಡದ ಪ್ರಮಾಣದಲ್ಲಿ ರೈತರ ಆತ್ಮಹತ್ಯೆ: ದೇವೇಗೌಡ

ಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ತೋರಿ ಸಾಲಕ್ಕೆ ಪರಿಹಾರ ಕಲ್ಪಿಸದಿದ್ದರೆ ಆ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು...

ಬೆಂಗಳೂರು: ಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ತೋರಿ ಸಾಲಕ್ಕೆ ಪರಿಹಾರ ಕಲ್ಪಿಸದಿದ್ದರೆ ಆ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು. ಸುಮಾರು ಐದು ಸಾವಿರ ಕೋಟಿಯಷ್ಟು ರೈತರ ಸಾಲ-ಬಡ್ಡಿ ಇದ್ದು ಅದನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಿ `ಕ್ರೆಡಿಟ್' ಪಡೆದುಕೊಳ್ಳಬೇಕು. ಹಣ ಹೊಂದಿಸುವುದು ಹೇಗೆ ಎಂಬುದನ್ನು ಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನೇ ಸಲಹೆ ನೀಡುತ್ತೇನೆ' ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ರೈತರ ಸಾಲ ಬಡ್ಡಿ ಮನ್ನಾಗೆ ಕೇಂದ್ರವು ಕ್ರಮ ಕೈಗೊಳ್ಳಬೇಕು. ಅವರು ಈ ಕ್ರಮಕ್ಕೆ ಹಿಂದೆ ನೋಡಿದರೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲಿ. ಒಟ್ಟಾರೆ 4ರಿಂದ 5 ಸಾವಿರ ಕೋಟಿ ಹಣ ಇದಾಗುತ್ತದೆ.

ಬೆಂಗಳೂರಿನಲ್ಲಿ ಭೂಮಿ ಒತ್ತುವರಿಯಾಗಿರುವುದನ್ನು ವಶಕ್ಕೆ ಪಡೆದುಕೊಂಡು ಅದನ್ನು ಹರಾಜು ಮಾಡಿದರೆ, ರಾಜ್ಯ ಸರ್ಕಾರಕ್ಕೆ ಅದಕ್ಕಿಂತ ಅದೆಷ್ಟೋ ಹಣ ಬರುತ್ತದೆ. ರೈತರ ಬಗ್ಗೆ ಕಾಳಜಿಯಿದ್ದರೆ ಇದನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ರಾಜ್ಯ ಸರ್ಕಾರ ರೈತರ ಎಲ್ಲ ಸಾಲವನ್ನು ತಾನೇ ವಹಿಸಿ ಕೊಳ್ಳಬೇಕು. ಈ ಬಗ್ಗೆ ಎಲ್ಲ ಬ್ಯಾಂಕ್‍ಗಳಿಗೆ ಸೂಕ್ತ ಆದೇಶ ಹೊರಡಿಸಿ, ರೈತರ ಸಾಲ ಹಾಗೂ ಬಡ್ಡಿಗೆ `ಅಂಡರ್ ಟೇಕಿಂಗ್' ಕೊಡಬೇಕು. ಆಗ ರೈತರು ನಿರಾಳರಾಗುತ್ತಾರೆ.

ಅಲ್ಲದೆ, ಹೊಸ ಸಾಲಕ್ಕೆ ಹಿಂದಿನ ಯಾವುದೇ ಸಾಲವನ್ನು ಮಾನದಂಡವಾಗಿ ಅನುಸರಿಸದೆ, ಸಾಲ ನೀಡಬೇಕು ಎಂದೂ ಸೂಚಿಸಬೇಕು ಎಂದು ಒತ್ತಾಯಿಸಿದರು. `ನನ್ನ ರಾಜಕೀಯ ಜೀವನದ 50 ವರ್ಷದಲ್ಲಿ ಹಿಂದೆಂದೂ ನೋಡದಷ್ಟು ಪ್ರಮಾಣದಲ್ಲಿ ಈ ವರ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.ಆದರೆ, ಈ ಬಾರಿ ಅವರ ಸಂಖ್ಯೆ ಈಗ ಹೆಚ್ಚಾಗಿದೆ. ಅವರ ಸಾವಿಗೆ ಸಾಲವೊಂದೇ ಕಾರಣವಲ್ಲ, ಬೇರೆ ಎಂದು ರಾಜ್ಯ ಸರ್ಕಾರವೇ ಬರೆಯಿಸುತ್ತಿದೆ. ಇದು ಎಲ್ಲ ರಾಜ್ಯಗಳಲ್ಲೂ ನಡೆಯುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು. ಲೋಕಸಭೆ ಕಲಾಪದಲ್ಲಿ ಯಾವಾಗ ಯಾರನ್ನು ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.ರಾಷ್ಟ್ರೀಯ ಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು.

ಯುಪಿಎ ಎರಡು ಅವಧಿ ಅಧಿಕಾರ ಮಾಡಿದ್ದಾರೆ. ಈಗ ಜನ ಎನ್‍ಡಿಗೆ ಅಧಿಕಾರ ಕೊಟ್ಟಿದ್ದಾರೆ. ಅವರು ಮೊದಲು ಕೆಲಸ ಮಾಡಲಿ, ಏನಿದ್ದರೂ ಅದನ್ನು ಜನರ ಮುಂದೆ ಇಡಿ ಎಂದು ಕಿವಿಮಾತು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT