ಘಟನಾ ಸ್ಥಳ 
ಜಿಲ್ಲಾ ಸುದ್ದಿ

ಬಾಗಲಕೋಟೆಯಲ್ಲಿ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕಾರ್ಮಿಕರು ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಸಮೀಪ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಶನಿವಾರ ನಡೆದಿದೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಸಮೀಪ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಶನಿವಾರ ನಡೆದಿದೆ.

ಟ್ರಾಕ್ಟರ್‌ಗೆ ಮಣ್ಣು ತುಂಬಿಸುತ್ತಿದ್ದ ವೇಳೆ ಏಕಾಏಕಿ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ನನ್ನು ರಕ್ಷಿಸಿ ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಶಂಕೆ ವ್ಯಕ್ತ ಪಡಿಸಲಾಗಿದೆ.

ಜೆಸಿಬಿ ಮೂಲಕ ಮಣ್ಣು ತೆರವು ಮಾಡಿ ನಾಲ್ವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಕ್ಕೆ ಸ್ಥಳೀಯರು ಸಾಥ್ ನೀಡುತ್ತಿದ್ದಾರೆ.

ಮೃತಪಟ್ಟವರನ್ನು ಇಮಾಮ್ ಸಾಬ್ ಸನದಿ(25), ಗಂಗಪ್ಪ ಕಾಂಬ್ಳೆ(35), ಗುರು ಸೂರ್ಯವಂಶಿ(38) ಹಾಗೂ ಅಬೂಬಕ್ಕರ್(25) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಜಮಖಂಡಿ ತಾಲೂಕಿನ ಆತಂಗಿ ಗ್ರಾಮದವರಾಗಿದ್ದಾರೆ.

ಘಟನೆಯಲ್ಲಿ ಹುಸೇನ್ ಸಾಬ್, ರಾಮು ಧಾರವಾಡಕರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಹಾಗೂ ತಹಶೀಲ್ದಾರ್ ಎ,ಎಲ್. ಅದಾಡೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT