ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರು(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಮುಕ್ತ ವಿವಿಗೆ ಮಹಿಳೆಯರ ಸಂಖ್ಯೆ ಹೆಚ್ಚಳ

ಮುಕ್ತ ಮತ್ತು ದೂರ ಶಿಕ್ಷಣದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಬಯಸಿ ದಾಖಲಾತಿ ಪಡೆಯುತ್ತಿರುವವರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ

ಬೆಂಗಳೂರು: 2020 ರ ವೇಳೆಗೆ ಮುಕ್ತ ಮತ್ತು ದೂರ ಹೀಗೆ ಒಟ್ಟು ದಾಖಲಾತಿ ಅನುಪಾತದಲ್ಲಿ ಮಹಿಳೆಯರ ಸಂಖ್ಯೆ ಶೇ.30 ರಷ್ಟು ಆಗಬೇಕು ಎಂದು ವಿಶ್ರಾಂತ ಕುಲಪತಿ ಡಾ.ಎನ್. ಎಸ್ ರಾಮೇಗೌಡ ಹೇಳಿದರು.
ಜೆ.ಪಿ.ನಗರದ ಆರ್.ವಿ.ಡೆಂಟಲ್ ಕಾಲೇಜಿನಲ್ಲಿ ನಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 28 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪದವಿ ಪ್ರಮಾಣ ಪತ್ರ ನೀಡಿ ನಂತರ ಮಾತನಾಡಿದರು.

ಮಹಿಳೆಯರಿಗೆ ಹಾಗೂ ಉನ್ನತ ವ್ಯಾಸಂಗ ಬಯಸುವ ಉದ್ಯೋಗಿಗಳಿಗೆ ವಿದ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಮುಕ್ತ ಮತ್ತು ದೂರಶಿಕ್ಷಣ ಮಹತ್ವದ ಪಾತ್ರ ವಹಿಸುತ್ತಿದೆ. ಸರ್ವೆ ಪ್ರಕಾರ ಮುಕ್ತ ಮತ್ತು ದೂರ ಶಿಕ್ಷಣದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಬಯಸಿ ದಾಖಲಾತಿ ಪಡೆಯುತ್ತಿರುವವರ ಸಂಖ್ಯೆ ಕೇವಲ ಶೇ.13-ರಷ್ಟಿದೆ. ಅದರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚುವಂತಾಗಬೇಕು ಅದಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ದೂರಶಿಕ್ಷಣ ವಿವಿಗಳು ನೀಡಲಿವೆ ಎಂದರು.

ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಜನತೆ (18-23 ವರ್ಷ) ದಾಖಲಾತಿ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. 2011ರಲ್ಲಿ ನಡೆದ ಸರ್ವೆ ಪ್ರಕಾರ ಒಟ್ಟು ದಾಖಲಾತಿ ಸಂಖ್ಯೆ(ಜಿಇಆರ್) ಶೇ.19.4  ರಷ್ಟಿದೆ. ಅದರಲ್ಲಿ ಪುರುಷರು ಶೇ.20.8  ಇದ್ದರೆ, ಮಹಿಳೆಯರು ಶೇ.17ರಷ್ಟಿದ್ದಾರೆ. ಕರ್ನಾಟಕದಲ್ಲಿನ ಜನಸಂಖ್ಯೆಯಲ್ಲಿ ಶೇ.25.5 ರಷ್ಟು ಮಂದಿ ಈ ದೂರಶಿಕ್ಷಣದ ಉಪಯೋಗ ಪಡೆಯುತ್ತಿದ್ದಾರೆ. ಅಂದರೆ, ದೇಶದ ಜಿಇಆರ್‍ಗಿಂತ ರಾಜ್ಯದಲ್ಲಿ ಇದರ ಸಂಖ್ಯೆ ಹೆಚ್ಚಿದೆ ಎಂದರು.

ರಾಜ್ಯದಿಂದ ಪದವಿ ಪಡೆದಿರುವ 2,500 ವಿದ್ಯಾರ್ಥಿಗಳಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮೂವರಿಗೆ ಚಿನ್ನದ ಪದಕ ಹಾಗೂ ಪದವಿ ಪತ್ರ ನೀಡಿ ಗೌರವಿಸಲಾಯಿತು. ಇಗ್ನೊದ ಪ್ರಾದೇಶಿಕ ನಿರ್ದೇಶಕ ಡಾ. ಎಂ.ಎಸ್. ಪಾರ್ಥಸಾರಥಿ, ಅಧಿಕಾರಿಗಳು, ಸಿಬ್ಬಂದಿ ವರ್ಗ ಸೇರಿದಂತೆ ಪದವಿ ಪಡೆದ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT