ಜಿಲ್ಲಾ ಸುದ್ದಿ

ಟಿಕೆಟ್ ನಿರಾಕರಣೆ; ವೆಂಕಟೇಶಮೂರ್ತಿ ಪ್ರತಿಭಟನೆ

ಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ...

ಬೆಂಗಳೂರು: ಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗ ರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ, ಪಕ್ಷದ ಮುಖಂಡರೊಂದಿಗೆ ಇನ್ನೊಂದು ಸುತ್ತಿನ ಚರ್ಚೆ ನಡೆಸಿ ಸೋಮವಾರ ನಿರ್ಧಾರ ಪ್ರಕಟಿಸುವುದಾಗಿ ವೆಂಕಟೇಶಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ವಿದ್ಯಾಪೀಠ ವೃತ್ತದ ಬಳಿ ಜಮಾಯಿಸಿದ್ದ 500ಕ್ಕೂ ಹೆಚ್ಚು ಜನರು ವೆಂಕಟೇಶ್ ಮೂರ್ತಿ ಯವರಿಗೆ ಟಿಕೆಟ್ ತಪ್ಪಿಹೋ ಗಿದ್ದರ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದರು. ನಂತರ
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರ ಮನೆಗೆ ತೆರಳಿ ಪ್ರಶ್ನಿಸಿದರು. ಅಷ್ಟೇ ಅಲ್ಲ, ಸಂಸದ ಅನಂತಕುಮಾರ್ ಬಿಹಾರದಲ್ಲಿರುವ ಕಾರಣ ವೆಂಕಟೇಶಮೂರ್ತಿಯವರಿಗೆ ಮುಖತಃ ಭೇಟಿ ಸಾಧ್ಯವಾಗಿಲ್ಲ.

ಇನ್ನು ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಸುಬ್ಬ ನರಸಿಂಹ ಅವರೊಂದಿಗೂ ಚರ್ಚಿಸಿದರು. ಅಲ್ಲಿಯೂ ವೆಂಕಟೇಶ ಮೂರ್ತಿಯವರಿಗೆ ಸ್ಪಷ್ಟ ಭರವಸೆ ಸಿಗಲಿಲ್ಲ. ಇಡೀ ದಿನದ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸೋಮವಾರ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT