ಜಿಲ್ಲಾ ಸುದ್ದಿ

ಟಿಕೆಟ್ ನಿರಾಕರಣೆ; ವೆಂಕಟೇಶಮೂರ್ತಿ ಪ್ರತಿಭಟನೆ

ಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ...

ಬೆಂಗಳೂರು: ಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗ ರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ, ಪಕ್ಷದ ಮುಖಂಡರೊಂದಿಗೆ ಇನ್ನೊಂದು ಸುತ್ತಿನ ಚರ್ಚೆ ನಡೆಸಿ ಸೋಮವಾರ ನಿರ್ಧಾರ ಪ್ರಕಟಿಸುವುದಾಗಿ ವೆಂಕಟೇಶಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ವಿದ್ಯಾಪೀಠ ವೃತ್ತದ ಬಳಿ ಜಮಾಯಿಸಿದ್ದ 500ಕ್ಕೂ ಹೆಚ್ಚು ಜನರು ವೆಂಕಟೇಶ್ ಮೂರ್ತಿ ಯವರಿಗೆ ಟಿಕೆಟ್ ತಪ್ಪಿಹೋ ಗಿದ್ದರ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದರು. ನಂತರ
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರ ಮನೆಗೆ ತೆರಳಿ ಪ್ರಶ್ನಿಸಿದರು. ಅಷ್ಟೇ ಅಲ್ಲ, ಸಂಸದ ಅನಂತಕುಮಾರ್ ಬಿಹಾರದಲ್ಲಿರುವ ಕಾರಣ ವೆಂಕಟೇಶಮೂರ್ತಿಯವರಿಗೆ ಮುಖತಃ ಭೇಟಿ ಸಾಧ್ಯವಾಗಿಲ್ಲ.

ಇನ್ನು ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಸುಬ್ಬ ನರಸಿಂಹ ಅವರೊಂದಿಗೂ ಚರ್ಚಿಸಿದರು. ಅಲ್ಲಿಯೂ ವೆಂಕಟೇಶ ಮೂರ್ತಿಯವರಿಗೆ ಸ್ಪಷ್ಟ ಭರವಸೆ ಸಿಗಲಿಲ್ಲ. ಇಡೀ ದಿನದ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸೋಮವಾರ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT